ನವದೆಹಲಿ : ತಾಪಮಾನ ಬದಲಾವಣೆಯಿಂದ ಭಾರತದಲ್ಲಿ ಬಿಸಿ ಗಾಳಿ ತೀವ್ರವಾಗುತ್ತಿದ್ದು, ದೇಶದಾದ್ಯಂತ ಶೇ 90ರಷ್ಟು ಜನರು ‘ಅತ್ಯಂತ ಅಪಾಯ‘ ಅಥವಾ ‘ಎಚ್ಚರಿಕೆ‘ ವಲಯದಲ್ಲಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.
ಕೇಂಬ್ರಿಡ್ಜ್ ಯೂನಿವರ್ಸಿಟಿಯ ರಮಿತ್ ದೇವನಾಥ್ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಈ ಅಧ್ಯಯನ ನಡೆಸಿದ್ದಾರೆ.ಮುಖ್ಯವಾಗಿ, ದೇಶದಲ್ಲೇ ಬಿಸಿಗಾಳಿಯ ತೀವ್ರ ಬಾಧೆಗೆ ಒಳಪಟ್ಟ ಪ್ರದೇಶ ದೆಹಲಿ ಎನಿಸಿಕೊಂಡಿದೆ. ಇದರ ನಿಯಂತ್ರಣಕ್ಕಾಗಿ ಇಲ್ಲಿನ ಸರ್ಕಾರ ಪರಿಣಾಮಕಾರಿಯಾದ ಪರಿಹಾರ ಯೋಜನೆ ರೂಪಿಸಿಲ್ಲ ಎಂದು ಅಧ್ಯಯನ ಬಹಿರಂಗಪಡಿಸಿದೆ.
ಅಲ್ಲದೇ, ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17,000ಕ್ಕೂ ಹೆಚ್ಚಿನ ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಭೂವಿಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ಎಂ.ರಾಜೀವನ್ ನೇತೃತ್ವ ತಂಡ ಪ್ರಕಟಿಸಿದ ಸಂಶೋಧನಾ ವರದಿ ಉಲ್ಲೇಖಿಸಿದೆ.
ಈ ವರದಿಯಲ್ಲಿ, 1971ರಿಂದ 2021ರ ವರೆಗೆ ದೇಶದ ವಿವಿಧೆಡೆ 706 ಬಾರಿ ಬಿಸಿಗಾಳಿ ಬೀಸಿದ ಘಟನೆಗಳು ಕಂಡುಬಂದಿವೆ ಎಂಬ ಸಾಲುಗಳಿವೆ.
ವಿಶ್ವಸಂಸ್ಥೆ ತಿಳಿಸಿದ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸುವುದರಲ್ಲಿ ಭಾರತಕ್ಕೆ ‘ಬಿಸಿ ಗಾಳಿ ಬಾಧೆ‘ ಅಡ್ಡಿಪಡಿಸಿದೆ. ಸರ್ಕಾರಗಳು ದೇಶದ ವಾಯುಗುಣವನ್ನು ಪುನರ್ ಪರಿಶೀಲನೆಗೆ ಒಳಪಡಿಸಿ ಈಗಿಂದಲೇ ಎಚ್ಚೆತ್ತುಕೊಳ್ಳಬೇಕೆಂದು ಅಧ್ಯಯನವು ಎಚ್ಚರಿಕೆ ನೀಡಿದೆ.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…