BREAKING NEWS

ಅಪಾಯದ ಹಂತ ತಲುಪಿದ ಬಿಸಿಗಾಳಿ

ನವದೆಹಲಿ : ತಾಪಮಾನ ಬದಲಾವಣೆಯಿಂದ ಭಾರತದಲ್ಲಿ ಬಿಸಿ ಗಾಳಿ ತೀವ್ರವಾಗುತ್ತಿದ್ದು, ದೇಶದಾದ್ಯಂತ ಶೇ 90ರಷ್ಟು ಜನರು ‘ಅತ್ಯಂತ ಅಪಾಯ‘ ಅಥವಾ ‘ಎಚ್ಚರಿಕೆ‘ ವಲಯದಲ್ಲಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಕೇಂಬ್ರಿಡ್ಜ್ ಯೂನಿವರ್ಸಿಟಿಯ ರಮಿತ್ ದೇವನಾಥ್ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಈ ಅಧ್ಯಯನ ನಡೆಸಿದ್ದಾರೆ.ಮುಖ್ಯವಾಗಿ, ದೇಶದಲ್ಲೇ ಬಿಸಿಗಾಳಿಯ ತೀವ್ರ ಬಾಧೆಗೆ ಒಳಪಟ್ಟ ಪ್ರದೇಶ ದೆಹಲಿ ಎನಿಸಿಕೊಂಡಿದೆ. ಇದರ ನಿಯಂತ್ರಣಕ್ಕಾಗಿ ಇಲ್ಲಿನ ಸರ್ಕಾರ ಪರಿಣಾಮಕಾರಿಯಾದ ಪರಿಹಾರ ಯೋಜನೆ ರೂಪಿಸಿಲ್ಲ ಎಂದು ಅಧ್ಯಯನ ಬಹಿರಂಗಪಡಿಸಿದೆ.

ಅಲ್ಲದೇ, ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17,000ಕ್ಕೂ ಹೆಚ್ಚಿನ ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಭೂವಿಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ಎಂ.ರಾಜೀವನ್ ನೇತೃತ್ವ ತಂಡ ಪ್ರಕಟಿಸಿದ ಸಂಶೋಧನಾ ವರದಿ ಉಲ್ಲೇಖಿಸಿದೆ.

ಈ ವರದಿಯಲ್ಲಿ, 1971ರಿಂದ 2021ರ ವರೆಗೆ ದೇಶದ ವಿವಿಧೆಡೆ 706 ಬಾರಿ ಬಿಸಿಗಾಳಿ ಬೀಸಿದ ಘಟನೆಗಳು ಕಂಡುಬಂದಿವೆ ಎಂಬ ಸಾಲುಗಳಿವೆ.

ವಿಶ್ವಸಂಸ್ಥೆ ತಿಳಿಸಿದ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸುವುದರಲ್ಲಿ ಭಾರತಕ್ಕೆ ‘ಬಿಸಿ ಗಾಳಿ ಬಾಧೆ‘ ಅಡ್ಡಿಪಡಿಸಿದೆ. ಸರ್ಕಾರಗಳು ದೇಶದ ವಾಯುಗುಣವನ್ನು ಪುನರ್‌ ಪರಿಶೀಲನೆಗೆ ಒಳಪಡಿಸಿ ಈಗಿಂದಲೇ ಎಚ್ಚೆತ್ತುಕೊಳ್ಳಬೇಕೆಂದು ಅಧ್ಯಯನವು ಎಚ್ಚರಿಕೆ ನೀಡಿದೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago