BREAKING NEWS

ಅಪಾಯದ ಹಂತ ತಲುಪಿದ ಬಿಸಿಗಾಳಿ

ನವದೆಹಲಿ : ತಾಪಮಾನ ಬದಲಾವಣೆಯಿಂದ ಭಾರತದಲ್ಲಿ ಬಿಸಿ ಗಾಳಿ ತೀವ್ರವಾಗುತ್ತಿದ್ದು, ದೇಶದಾದ್ಯಂತ ಶೇ 90ರಷ್ಟು ಜನರು ‘ಅತ್ಯಂತ ಅಪಾಯ‘ ಅಥವಾ ‘ಎಚ್ಚರಿಕೆ‘ ವಲಯದಲ್ಲಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಕೇಂಬ್ರಿಡ್ಜ್ ಯೂನಿವರ್ಸಿಟಿಯ ರಮಿತ್ ದೇವನಾಥ್ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಈ ಅಧ್ಯಯನ ನಡೆಸಿದ್ದಾರೆ.ಮುಖ್ಯವಾಗಿ, ದೇಶದಲ್ಲೇ ಬಿಸಿಗಾಳಿಯ ತೀವ್ರ ಬಾಧೆಗೆ ಒಳಪಟ್ಟ ಪ್ರದೇಶ ದೆಹಲಿ ಎನಿಸಿಕೊಂಡಿದೆ. ಇದರ ನಿಯಂತ್ರಣಕ್ಕಾಗಿ ಇಲ್ಲಿನ ಸರ್ಕಾರ ಪರಿಣಾಮಕಾರಿಯಾದ ಪರಿಹಾರ ಯೋಜನೆ ರೂಪಿಸಿಲ್ಲ ಎಂದು ಅಧ್ಯಯನ ಬಹಿರಂಗಪಡಿಸಿದೆ.

ಅಲ್ಲದೇ, ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17,000ಕ್ಕೂ ಹೆಚ್ಚಿನ ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಭೂವಿಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ಎಂ.ರಾಜೀವನ್ ನೇತೃತ್ವ ತಂಡ ಪ್ರಕಟಿಸಿದ ಸಂಶೋಧನಾ ವರದಿ ಉಲ್ಲೇಖಿಸಿದೆ.

ಈ ವರದಿಯಲ್ಲಿ, 1971ರಿಂದ 2021ರ ವರೆಗೆ ದೇಶದ ವಿವಿಧೆಡೆ 706 ಬಾರಿ ಬಿಸಿಗಾಳಿ ಬೀಸಿದ ಘಟನೆಗಳು ಕಂಡುಬಂದಿವೆ ಎಂಬ ಸಾಲುಗಳಿವೆ.

ವಿಶ್ವಸಂಸ್ಥೆ ತಿಳಿಸಿದ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸುವುದರಲ್ಲಿ ಭಾರತಕ್ಕೆ ‘ಬಿಸಿ ಗಾಳಿ ಬಾಧೆ‘ ಅಡ್ಡಿಪಡಿಸಿದೆ. ಸರ್ಕಾರಗಳು ದೇಶದ ವಾಯುಗುಣವನ್ನು ಪುನರ್‌ ಪರಿಶೀಲನೆಗೆ ಒಳಪಡಿಸಿ ಈಗಿಂದಲೇ ಎಚ್ಚೆತ್ತುಕೊಳ್ಳಬೇಕೆಂದು ಅಧ್ಯಯನವು ಎಚ್ಚರಿಕೆ ನೀಡಿದೆ.

lokesh

Recent Posts

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

2 mins ago

ಟರ್ಕಿ ಶಾಲೆಯಲ್ಲಿ ಗುಂಡಿನ ದಾಳಿ ; ಪೊಲೀಸ್‌ ಅಧಿಕಾರಿ ಮಗನಿಂದ ನರಮೇಧ!

ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…

37 mins ago

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…

1 hour ago

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

2 hours ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

3 hours ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

4 hours ago