ಚೆನ್ನೈ: ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಅಮಿತ್ ಶಾ ಅವರು ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಪಾದಾಯಾತ್ರೆಗೆ ಚಾಲನೆ ನೀಡಿ, ವಂಶ ರಾಜಕೀಯದ ಕುರಿತು ಮಾತನಾಡಿದ್ದರು.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಡಿಎಂಕೆ ಮಿತ್ರ ಪಕ್ಷಗಳು ರಾಜವಂಶದ ರಾಜಕಾರಣವನ್ನು ಉತ್ತೇಜಿಸುತ್ತಿವೆ ಎಂದು ಅವರು ಆರೋಪಿಸಿದ್ದರು ಹಾಗೂ ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದರು.
ಚೆನ್ನೈನಲ್ಲಿ ಡಿಎಂಕೆ ಯೂತ್ ವಿಂಗ್ನ ಹೊಸ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಉದಯಾನಿಧಿ, “ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ ನಾನು ಶಾಸಕನಾಗಿದ್ದೇನೆ. ಆ ನಂತರ ನನ್ನನ್ನು ಮಂತ್ರಿಯನ್ನಾಗಿ ಮಾಡಲಾಯಿತು” ಎಂದು ಪ್ರತಿಪಾದಿಸಿದರು.
“ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿ ಆಗಿದ್ದು ಹೇಗೆ?. ಜಯ ಶಾ ಅವರು ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ ಹಾಗೂ ಅವರು ಎಷ್ಟು ರನ್ ಗಳಿಸಿದ್ದಾರೆ?” ಎಂದು ಉತ್ತರಿಸುವಂತೆ ಉದಯಾನಿಧಿ ಆಗ್ರಹಿಸಿದ್ದಾರೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…