ಚೆನ್ನೈ: ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಅಮಿತ್ ಶಾ ಅವರು ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಪಾದಾಯಾತ್ರೆಗೆ ಚಾಲನೆ ನೀಡಿ, ವಂಶ ರಾಜಕೀಯದ ಕುರಿತು ಮಾತನಾಡಿದ್ದರು.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಡಿಎಂಕೆ ಮಿತ್ರ ಪಕ್ಷಗಳು ರಾಜವಂಶದ ರಾಜಕಾರಣವನ್ನು ಉತ್ತೇಜಿಸುತ್ತಿವೆ ಎಂದು ಅವರು ಆರೋಪಿಸಿದ್ದರು ಹಾಗೂ ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದರು.
ಚೆನ್ನೈನಲ್ಲಿ ಡಿಎಂಕೆ ಯೂತ್ ವಿಂಗ್ನ ಹೊಸ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಉದಯಾನಿಧಿ, “ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ ನಾನು ಶಾಸಕನಾಗಿದ್ದೇನೆ. ಆ ನಂತರ ನನ್ನನ್ನು ಮಂತ್ರಿಯನ್ನಾಗಿ ಮಾಡಲಾಯಿತು” ಎಂದು ಪ್ರತಿಪಾದಿಸಿದರು.
“ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿ ಆಗಿದ್ದು ಹೇಗೆ?. ಜಯ ಶಾ ಅವರು ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ ಹಾಗೂ ಅವರು ಎಷ್ಟು ರನ್ ಗಳಿಸಿದ್ದಾರೆ?” ಎಂದು ಉತ್ತರಿಸುವಂತೆ ಉದಯಾನಿಧಿ ಆಗ್ರಹಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…