ಚೆನ್ನೈ: ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಅಮಿತ್ ಶಾ ಅವರು ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಪಾದಾಯಾತ್ರೆಗೆ ಚಾಲನೆ ನೀಡಿ, ವಂಶ ರಾಜಕೀಯದ ಕುರಿತು ಮಾತನಾಡಿದ್ದರು.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಡಿಎಂಕೆ ಮಿತ್ರ ಪಕ್ಷಗಳು ರಾಜವಂಶದ ರಾಜಕಾರಣವನ್ನು ಉತ್ತೇಜಿಸುತ್ತಿವೆ ಎಂದು ಅವರು ಆರೋಪಿಸಿದ್ದರು ಹಾಗೂ ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದರು.
ಚೆನ್ನೈನಲ್ಲಿ ಡಿಎಂಕೆ ಯೂತ್ ವಿಂಗ್ನ ಹೊಸ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಉದಯಾನಿಧಿ, “ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ ನಾನು ಶಾಸಕನಾಗಿದ್ದೇನೆ. ಆ ನಂತರ ನನ್ನನ್ನು ಮಂತ್ರಿಯನ್ನಾಗಿ ಮಾಡಲಾಯಿತು” ಎಂದು ಪ್ರತಿಪಾದಿಸಿದರು.
“ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿ ಆಗಿದ್ದು ಹೇಗೆ?. ಜಯ ಶಾ ಅವರು ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ ಹಾಗೂ ಅವರು ಎಷ್ಟು ರನ್ ಗಳಿಸಿದ್ದಾರೆ?” ಎಂದು ಉತ್ತರಿಸುವಂತೆ ಉದಯಾನಿಧಿ ಆಗ್ರಹಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…