ಬೆಂಗಳೂರು : ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಇದೀಗ ಸೆಪ್ಟಂಬರ್ 18 ರಂದು ಗಣೇಶ ಹಬ್ಬ ಹಿನ್ನೆಲೆ ಖಾಸಗಿ ಬಸ್ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ.ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್ಗಳ ದರ ಹೆಚ್ಚಿಸಲಾಗಿದೆ. ಇನ್ನು ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಸಹ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ ಎಂಬ ಮಾಹಿತಿ ಗಣೇಶ ಹಬ್ಬದ ಹಿಂದಿನ ದಿನ ಊರಿಗೆ ಹೋಗಬೇಕೆಂದರೇ ಎರಡು-ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತೆರಳಬೇಕು. ನಗರದ ಪ್ರದೇಶದಲ್ಲಿ ದುಡಿಯಲು ಬಂದಿರುವ ಜನರು ಕೆಲಸ ಮುಗಿಸಿ ತಮ್ಮ ತಮ್ಮ ಊರಿಗೆ ತೆರಳುತ್ತಾರೆ ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ ಎನ್ನಲಾಗಿದೆ.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…