ಬೆಂಗಳೂರು : ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಇದೀಗ ಸೆಪ್ಟಂಬರ್ 18 ರಂದು ಗಣೇಶ ಹಬ್ಬ ಹಿನ್ನೆಲೆ ಖಾಸಗಿ ಬಸ್ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ.ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್ಗಳ ದರ ಹೆಚ್ಚಿಸಲಾಗಿದೆ. ಇನ್ನು ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಸಹ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ ಎಂಬ ಮಾಹಿತಿ ಗಣೇಶ ಹಬ್ಬದ ಹಿಂದಿನ ದಿನ ಊರಿಗೆ ಹೋಗಬೇಕೆಂದರೇ ಎರಡು-ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತೆರಳಬೇಕು. ನಗರದ ಪ್ರದೇಶದಲ್ಲಿ ದುಡಿಯಲು ಬಂದಿರುವ ಜನರು ಕೆಲಸ ಮುಗಿಸಿ ತಮ್ಮ ತಮ್ಮ ಊರಿಗೆ ತೆರಳುತ್ತಾರೆ ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ ಎನ್ನಲಾಗಿದೆ.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…