BREAKING NEWS

ಅಡಿಡಾಸ್, ನೈಕ್‌ ಸ್ಪೋರ್ಟ್ಸ್‌ ಶೂ ತಯಾರಿಕಾ ಕಂಪನಿಯಿಂದ ತಮಿಳುನಾಡಿನಲ್ಲಿ ಭಾರೀ ಹೂಡಿಕೆ

ಚೆನ್ನೈ : ವಿಶ್ವದ ಅತಿದೊಡ್ಡ ಬ್ರಾಂಡೆಡ್‌ ಸ್ಪೋರ್ಟ್ಸ್ ಶೂ ತಯಾರಿಕಾ ಕಂಪೆನಿ ಎನಿಸಿರುವ ತೈವಾನ್‌ ಮೂಲದ ಪೌ ಚೆನ್‌ ಕಂಪನಿಯ ಅಂಗ ಸಂಸ್ಥೆಯೊಂದು ತಮಿಳುನಾಡಿನಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ. ಈ ಸಂಬಂಧ 2,302 ಕೋಟಿ ರೂ.ಗಳ ಭಾರೀ ಹೂಡಿಕೆ ಮಾಡಲಿದೆ.

ಹಲವು ಜಾಗತಿಕ ಬ್ರಾಂಡ್‌ಗಳಿಗೆ ಶೂಗಳನ್ನು ಉತ್ಪಾದಿಸುವ ಮೂಲಕ ಜಾಗತಿಕ ಮನ್ನಣೆ ಗಳಿಸಿರುವ ಪೌ ಚೆನ್‌ ಕಂಪೆನಿಯು 2022ರಲ್ಲಿ 27.2 ಕೋಟಿ ಜೋಡಿ ಶೂಗಳನ್ನು ತಯಾರಿಸಿ ವಿಶ್ವದಾದ್ಯಂತ ರಫ್ತು ಮಾಡಿದೆ. ಇದು ಪ್ರಮುಖ ಜಾಗತಿಕ ಬ್ರ್ಯಾಂಡ್‌ಗಳಾದ ನೈಕಿ, ಅಡಿಡಾಸ್‌, ಏಸಿಕ್ಸ್‌, ಕ್ಲಾರ್ಕ್ಸ್‌, ರೀಬಾಕ್‌, ಪೂಮಾ, ಕ್ರಾಕ್ಸ್‌, ಟಿಂಬರ್‌ಲ್ಯಾಂಡ್‌ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಶೂಗಳನ್ನು ತಯಾರಿಸುತ್ತದೆ. ಇಂಥ ದೈತ್ಯ ಕಂಪನಿಯ ಅಂಗ ಸಂಸ್ಥೆಯು ತಮಿಳುನಾಡಿನಲ್ಲಿ ಬೃಹತ್‌ ಪ್ರಮಾಣದಲ್ಲಿ ಹೂಡಿಕೆ ಮಾಡಲು ಸಿದ್ಧತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರೊಂದಿಗೆ ಆನ್‌ಲೈನ್‌ ಮೂಲಕ ಸಭೆ ನಡೆಸಿದ ಬಳಿಕ ಪೌ ಚೆನ್‌ ಕಂಪೆನಿಯ ಉಪಾಧ್ಯಕ್ಷ ಜಾರ್ಜ್‌ ಲಿಯು ಅವರು “ಇದು ಭಾರತದಲ್ಲಿ ಬರಲಿರುವ ಅನೇಕ ಹೂಡಿಕೆಗಳಲ್ಲಿ ಮೊದಲನೆ ಪ್ರಯತ್ನವಾಗಿದೆ. ನಮ್ಮ ಹೂಡಿಕೆ ಯೋಜನೆಗೆ ಉತ್ತಮ ಬೆಂಬಲ ಸಿಗಲಿದೆ ಎಂಬ ವಿಶ್ವಾಸವಿದೆ,” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವದ ಅತಿದೊಡ್ಡ ಬ್ರಾಂಡೆಡ್‌ ಸ್ಪೋರ್ಟ್ಸ್ ಶೂ ತಯಾರಿಕಾ ಕಂಪೆನಿ ಪೌ ಚೆನ್‌ನ ಅಂಗ ಸಂಸ್ಥೆಯ ಹೂಡಿಕೆಯಿಂದ ತಮಿಳುನಾಡಿನಲ್ಲಿ 12 ವರ್ಷಗಳ ಅವಧಿಯಲ್ಲಿ ಸುಮಾರು 20,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ತೈವಾನ್‌ ಮೂಲದ ಕಂಪನಿಯು ಹೇಳಿಕೊಂಡಿದೆ.

ಜಾರ್ಜಿಯೊ ಅರ್ಮಾನಿ ಮತ್ತು ಗುಚ್ಚಿ ಸೇರಿದಂತೆ ಅನೇಕ ಬ್ರಾಂಡ್‌ಗಳಿಂದ ಕಳೆದ ಐದು ವರ್ಷಗಳಲ್ಲಿ ಸಾವಿರಾರು ಕೋಟಿ ಹೂಡಿಕೆ ಪಡೆದುಕೊಂಡಿರುವ ನೆರೆಯ ರಾಜ್ಯ ತಮಿಳುನಾಡು, ಭಾರತದ ಪಾದರಕ್ಷೆ ರಫ್ತಿನಲ್ಲಿ ಇದೀಗ ಶೇ. 45ರಷ್ಟು ಪಾಲು ಪಡೆದಿದೆ ಎಂದು ಅಲ್ಲಿನ ರಾಜ್ಯ ಸರಕಾರದ ವರದಿ ತಿಳಿಸಿದೆ. ಈ ಹೊಸ ಹೂಡಿಕೆಯು ತಮಿಳುನಾಡಿನ ಪಾದರಕ್ಷೆ ಉದ್ಯಮಕ್ಕೆ ಇನ್ನಷ್ಟು ಶಕ್ತಿ ತುಂಬಲಿದೆ ಎಂದು ಎಂ.ಕೆ. ಸ್ಟಾಲಿನ್‌ ಸರಕಾರ ವಿಶ್ವಾಸ ವ್ಯಕ್ತಪಡಿಸಿದೆ.

ತಮಿಳುನಾಡು ರಾಜ್ಯವು ಅನಾದಿ ಕಾಲದಿಂದಲೂ ಉದ್ಯಮಗಳಿಗೆ ಹೆಸರಾಗಿದ್ದು, ಪಾದರಕ್ಷೆ, ಎಲೆಕ್ಟ್ರಾನಿಕ್ಸ್‌ ಉಪಕರಣಗಳ ಅಂತರಾಷ್ಟ್ರೀಯ ತಯಾರಕರಿಗೆ ಜನಪ್ರಿಯ ತಾಣವಾಗಿ ಹೊರಹೊಮ್ಮುತ್ತಿದೆ. ಇತ್ತೀಚೆಗೆ ಚಿಪ್‌ ತಯಾರಿಕೆ, ಮೊಬೈಲ್‌ ಫೋನ್‌ ಉತ್ಪಾದನೆ, ಎಲೆಕ್ಟ್ರಿಕ್‌ ವಾಹನಗಳ ಉತ್ಪಾದನೆಯಲ್ಲೂ ಹೆಸರು ಮಾಡುತ್ತಿದ್ದು, ಹೊಸ ತಲೆಮಾರಿನ ಕಂಪನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈ ಮೂಲಕ ನೆರೆಯ ರಾಜ್ಯಗಳಿಗೆ ಭಾರೀ ಪೈಪೋಟಿ ನೀಡುತ್ತಿದೆ.

lokesh

Recent Posts

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

29 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

1 hour ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

1 hour ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

1 hour ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 hours ago