BREAKING NEWS

ಅಡಿಡಾಸ್, ನೈಕ್‌ ಸ್ಪೋರ್ಟ್ಸ್‌ ಶೂ ತಯಾರಿಕಾ ಕಂಪನಿಯಿಂದ ತಮಿಳುನಾಡಿನಲ್ಲಿ ಭಾರೀ ಹೂಡಿಕೆ

ಚೆನ್ನೈ : ವಿಶ್ವದ ಅತಿದೊಡ್ಡ ಬ್ರಾಂಡೆಡ್‌ ಸ್ಪೋರ್ಟ್ಸ್ ಶೂ ತಯಾರಿಕಾ ಕಂಪೆನಿ ಎನಿಸಿರುವ ತೈವಾನ್‌ ಮೂಲದ ಪೌ ಚೆನ್‌ ಕಂಪನಿಯ ಅಂಗ ಸಂಸ್ಥೆಯೊಂದು ತಮಿಳುನಾಡಿನಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ. ಈ ಸಂಬಂಧ 2,302 ಕೋಟಿ ರೂ.ಗಳ ಭಾರೀ ಹೂಡಿಕೆ ಮಾಡಲಿದೆ.

ಹಲವು ಜಾಗತಿಕ ಬ್ರಾಂಡ್‌ಗಳಿಗೆ ಶೂಗಳನ್ನು ಉತ್ಪಾದಿಸುವ ಮೂಲಕ ಜಾಗತಿಕ ಮನ್ನಣೆ ಗಳಿಸಿರುವ ಪೌ ಚೆನ್‌ ಕಂಪೆನಿಯು 2022ರಲ್ಲಿ 27.2 ಕೋಟಿ ಜೋಡಿ ಶೂಗಳನ್ನು ತಯಾರಿಸಿ ವಿಶ್ವದಾದ್ಯಂತ ರಫ್ತು ಮಾಡಿದೆ. ಇದು ಪ್ರಮುಖ ಜಾಗತಿಕ ಬ್ರ್ಯಾಂಡ್‌ಗಳಾದ ನೈಕಿ, ಅಡಿಡಾಸ್‌, ಏಸಿಕ್ಸ್‌, ಕ್ಲಾರ್ಕ್ಸ್‌, ರೀಬಾಕ್‌, ಪೂಮಾ, ಕ್ರಾಕ್ಸ್‌, ಟಿಂಬರ್‌ಲ್ಯಾಂಡ್‌ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಶೂಗಳನ್ನು ತಯಾರಿಸುತ್ತದೆ. ಇಂಥ ದೈತ್ಯ ಕಂಪನಿಯ ಅಂಗ ಸಂಸ್ಥೆಯು ತಮಿಳುನಾಡಿನಲ್ಲಿ ಬೃಹತ್‌ ಪ್ರಮಾಣದಲ್ಲಿ ಹೂಡಿಕೆ ಮಾಡಲು ಸಿದ್ಧತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರೊಂದಿಗೆ ಆನ್‌ಲೈನ್‌ ಮೂಲಕ ಸಭೆ ನಡೆಸಿದ ಬಳಿಕ ಪೌ ಚೆನ್‌ ಕಂಪೆನಿಯ ಉಪಾಧ್ಯಕ್ಷ ಜಾರ್ಜ್‌ ಲಿಯು ಅವರು “ಇದು ಭಾರತದಲ್ಲಿ ಬರಲಿರುವ ಅನೇಕ ಹೂಡಿಕೆಗಳಲ್ಲಿ ಮೊದಲನೆ ಪ್ರಯತ್ನವಾಗಿದೆ. ನಮ್ಮ ಹೂಡಿಕೆ ಯೋಜನೆಗೆ ಉತ್ತಮ ಬೆಂಬಲ ಸಿಗಲಿದೆ ಎಂಬ ವಿಶ್ವಾಸವಿದೆ,” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವದ ಅತಿದೊಡ್ಡ ಬ್ರಾಂಡೆಡ್‌ ಸ್ಪೋರ್ಟ್ಸ್ ಶೂ ತಯಾರಿಕಾ ಕಂಪೆನಿ ಪೌ ಚೆನ್‌ನ ಅಂಗ ಸಂಸ್ಥೆಯ ಹೂಡಿಕೆಯಿಂದ ತಮಿಳುನಾಡಿನಲ್ಲಿ 12 ವರ್ಷಗಳ ಅವಧಿಯಲ್ಲಿ ಸುಮಾರು 20,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ತೈವಾನ್‌ ಮೂಲದ ಕಂಪನಿಯು ಹೇಳಿಕೊಂಡಿದೆ.

ಜಾರ್ಜಿಯೊ ಅರ್ಮಾನಿ ಮತ್ತು ಗುಚ್ಚಿ ಸೇರಿದಂತೆ ಅನೇಕ ಬ್ರಾಂಡ್‌ಗಳಿಂದ ಕಳೆದ ಐದು ವರ್ಷಗಳಲ್ಲಿ ಸಾವಿರಾರು ಕೋಟಿ ಹೂಡಿಕೆ ಪಡೆದುಕೊಂಡಿರುವ ನೆರೆಯ ರಾಜ್ಯ ತಮಿಳುನಾಡು, ಭಾರತದ ಪಾದರಕ್ಷೆ ರಫ್ತಿನಲ್ಲಿ ಇದೀಗ ಶೇ. 45ರಷ್ಟು ಪಾಲು ಪಡೆದಿದೆ ಎಂದು ಅಲ್ಲಿನ ರಾಜ್ಯ ಸರಕಾರದ ವರದಿ ತಿಳಿಸಿದೆ. ಈ ಹೊಸ ಹೂಡಿಕೆಯು ತಮಿಳುನಾಡಿನ ಪಾದರಕ್ಷೆ ಉದ್ಯಮಕ್ಕೆ ಇನ್ನಷ್ಟು ಶಕ್ತಿ ತುಂಬಲಿದೆ ಎಂದು ಎಂ.ಕೆ. ಸ್ಟಾಲಿನ್‌ ಸರಕಾರ ವಿಶ್ವಾಸ ವ್ಯಕ್ತಪಡಿಸಿದೆ.

ತಮಿಳುನಾಡು ರಾಜ್ಯವು ಅನಾದಿ ಕಾಲದಿಂದಲೂ ಉದ್ಯಮಗಳಿಗೆ ಹೆಸರಾಗಿದ್ದು, ಪಾದರಕ್ಷೆ, ಎಲೆಕ್ಟ್ರಾನಿಕ್ಸ್‌ ಉಪಕರಣಗಳ ಅಂತರಾಷ್ಟ್ರೀಯ ತಯಾರಕರಿಗೆ ಜನಪ್ರಿಯ ತಾಣವಾಗಿ ಹೊರಹೊಮ್ಮುತ್ತಿದೆ. ಇತ್ತೀಚೆಗೆ ಚಿಪ್‌ ತಯಾರಿಕೆ, ಮೊಬೈಲ್‌ ಫೋನ್‌ ಉತ್ಪಾದನೆ, ಎಲೆಕ್ಟ್ರಿಕ್‌ ವಾಹನಗಳ ಉತ್ಪಾದನೆಯಲ್ಲೂ ಹೆಸರು ಮಾಡುತ್ತಿದ್ದು, ಹೊಸ ತಲೆಮಾರಿನ ಕಂಪನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈ ಮೂಲಕ ನೆರೆಯ ರಾಜ್ಯಗಳಿಗೆ ಭಾರೀ ಪೈಪೋಟಿ ನೀಡುತ್ತಿದೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago