BREAKING NEWS

ಮನುಷ್ಯರಿಗೆ ಜಿಕಾ ವೈರಸ್ ಸೋಂಕು ತಗುಲಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆಯಾದರೂ, ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ.. ಗರ್ಭಿಣಿಯರು ಎಚ್ಚರಿಕೆಯಿಂದಿರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಝೀಕಾ ವೈರಸ್ ಪಾಟಿಸಿವ್ ಆಗಿರುವುದು ಪತ್ತೆಯಾಗಿಲ್ಲ. ಆದರೂ ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಮನುಷ್ಯರಲ್ಲಿ ಝೀಕಾ ಪಾಸಿಟಿವ್ ಬಂದಿಲ್ಲ. ಸೊಳ್ಳೆಗಳಿಗೆ ಬಂದಿದೆ. ಚಿಕ್ಕಬಳ್ಳಾಪುರದ ಹೊಂಡದಲ್ಲಿದ್ದ ಸೊಳ್ಳೆಗಳ ಪೂಲ್ ನಲ್ಲಿ ಜಿಕಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ 10 ದಿನಗಳ ಹಿಂದೆ ವರದಿ ಬಂದಿದೆ ಎಂದರು.

ಅಂತೆಯೇ, ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು. ಆದರೆ ಝೀಕಾ ಮತ್ತು ನಿಫಾ ವೈರಸ್ ಬೇರೆ ಬೇರೆಯಾಗಿವೆ. ನಿಫಾ ಗಂಭೀರ ಸ್ವರೂಪದ ವೈರಾಣು ಆದರೆ ಝೀಕಾ ಬಗ್ಗೆ ಭಯ ಬೇಡ. ಆದರೂ ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಆಸ್ಪತ್ರೆಯಲ್ಲಿ ಇದ್ದವರಿಗೆ ಪರೀಕ್ಷೆ ಮಾಡಲಾಗಿದೆ. ಖಾಯಿಲೆ ಲಕ್ಷಣ ಇದ್ದವರ ಸ್ಯಾಂಪಲ್ ಪಡೆಯಲಾಗಿದೆ.

ಇನ್ನು 3 ದಿನಗಳಲ್ಲಿ ರಿಪೋರ್ಟ್ ಬರುವ ಸಾಧ್ಯತೆ ಇದೆ. ವೈರಲ್ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಸರ್ವಿಲೆನ್ಸ್ ಮಾಡಿರುವುದಕ್ಕೆ ಈಗ ವೈರಸ್ ಪತ್ತೆಯಾಗಿದೆ ಎಂದು ತಿಳಿಸಿದರು.

https://x.com/PTI_News/status/1720006586238734601?s=20

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

9 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

22 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

22 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

22 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

22 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

22 hours ago