BREAKING NEWS

ಹೈದರಾಬಾದ್: ಹೋರಾಟಗಾರ, ಜಾನಪದ ಗಾಯಕ ಗದ್ದರ್ ನಿಧನ

ಹೈದರಾಬಾದ್ : ತೆಲುಗಿನ ಪ್ರಸಿದ್ಧ ಗಾಯಕ, ಕವಿ, ಹೋರಾಟಗಾರ ಗದ್ದರ್ ಇಂದು ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಗುಮ್ಮಡಿ ವಿಟ್ಟಲ್ ರಾವ್ ಅವರು ಗದ್ದರ್ ಎಂದೇ ಪ್ರಸಿದ್ದರಾಗಿದ್ದರು. ಗದ್ದರ್ ಅವರು ಹೈದರಾಬಾದ್ ನ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅಲ್ಲಿ ಅವರು ರವಿವಾರ ಕೊನೆಯುಸಿರೆಳೆದರು.

ಗದ್ದರ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಗುಮ್ಮಡಿ ವಿಟ್ಟಲ್ ರಾವ್ (ಜನನ 1949), ಗದ್ದರ್ ಎಂದೇ ಚಿರಪರಿಚಿತರಾಗಿದ್ದರು. 2010ರ ವರೆಗೆ ನಕ್ಸಲ್ ಚಳವಳಿಯಲ್ಲಿ ಸಕ್ರೀಯವಾಗಿದ್ದ ಅವರು ನಂತರ ತೆಲಂಗಾಣ ರಾಜ್ಯ ರಚನೆಗಾಗಿ ಚಳವಳಿಯಲ್ಲಿ ಸೇರಿಕೊಂಡರು.

ತೆಲಂಗಾಣ ಚಳವಳಿಯ ಸಮಯದಲ್ಲಿ ಗದ್ದರ್ ಅವರು ತಮ್ಮ ಹಾಡುಗಳಿಂದಲೇ ಪ್ರಮುಖ ಪಾತ್ರವನ್ನು ನಿರ್ವಹಿಸಿದರು. ಅವರು ತೆಲಂಗಾಣ ಚಳವಳಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು, ಈ ಭಾಗದಲ್ಲಿ ಅನ್ಯಾಯಗಳನ್ನು ಪರಿಹರಿಸಲು ತಮ್ಮ ಗಾಯನವನ್ನು ಬಳಸಿದರು.

ಇತ್ತೀಚೆಗೆ ಖಮ್ಮಂನಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಗದ್ದರ್ ಭಾಗವಹಿಸಿದ್ದರು.

1949ರಲ್ಲಿ ತೂಪ್ರಾನ್‌ನಲ್ಲಿ ಗುಮ್ಮಡಿ ವಿಠಲ್ ರಾವ್ ಆಗಿ ಜನಿಸಿದ ಗದ್ದರ್ 2010ರ ವರೆಗೆ ನಕ್ಸಲಿಸಂ ಚಳವಳಿಯೊಂದಿಗೆ ಸಂಬಂಧ ಹೊಂದಿದ್ದರು. ನಂತರ ಅವರು ತೆಲಂಗಾಣ ಚಳವಳಿಯಲ್ಲಿ ಪ್ರಮುಖ ವ್ಯಕ್ತಿಯಾದರು.

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

7 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

7 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

8 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

8 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

8 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

9 hours ago