BREAKING NEWS

ಶಾಂಘ್ರಿಲಾ ಹೋಟೆಲ್‌ ಮುಂದೆ ಹೈಡ್ರಾಮಾ; ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಕಾರ್ಯಕರ್ತರು ಪಟ್ಟು!

ಬೆಂಗಳೂರು: ಸಿಎಲ್ ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಬೆಂಬಲಿಗರು ಡಿಕೆಶಿ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಯಾರು ಎಂಬ ಕುರಿತಾಗಿ ಶಾಸಕರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ.

ಒಂದು ಕಡೆಯಲ್ಲಿ ಸಿಎಲ್ ಪಿ ಸಭೆ ನಡೆಯುತ್ತಿದ್ದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ‌ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರ ಘೋಷಣೆ ಜೋರಾಗಿದೆ. ಡಿಕೆಶಿ ಬೆಂಬಲಿಗರು ಡಿಕೆ ಡಿಕೆ ಎಂದು ಘೋಷಣೆ ಕೂಗುತ್ತಿದ್ದಾರೆ ಮತ್ತೊಂದು ಕಡೆಯಲ್ಲಿ ಸಿದ್ದು ಸಿದ್ದು ಎಂದು ಸಿದ್ದರಾಮಯ್ಯ ಕಡೆಯವರು ಘೋಷಣೆ ಕೂಗುತ್ತಿದ್ದಾರೆ.

ಸಿದ್ದು-ಡಿಕೆಶಿ ಎರಡು ಶಕ್ತಿ ಇದ್ದಂತೆ; ನಾನೇನು ಸನ್ಯಾಸಿ ಅಲ್ಲ

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಸಿಎಂ ಯಾರು ಆಗಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು‌. ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡು ಶಕ್ತಿಗಳು ಇದ್ದಂತೆ ಎಂದರು. ಇನ್ನು ಸಚಿವ ಸ್ಥಾನ ವಿಚಾರವಾಗಿ ಮಾತನಾಡಿ, ನಾನು ಸನ್ಯಾಸಿ ಅಲ್ಲ, ಆದರೆ ರಾಜ್ಯ ನಾಯಕರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಕಡಿಮೆ ಸೀಟು ಬಂದಿದ್ದರೆ ಆಪರೇಷನ್ ಕಮಲ ಮಾಡುತ್ತಿದ್ದರು ಬಿಜೆಪಿಯವರು ಎಂದು ಬಿಜೆಪಿ ವಿರುದ್ಧನೂ ವಾಗ್ದಾಳಿ ನಡೆಸಿದರು.

ಪಕ್ಷೇತರ ಅಭ್ಯರ್ಥಿ ಕೂಡಾ ಭಾಗಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಆಗಮಿಸಿದ್ದಾರೆ. ಭಾನುವಾರ ಬೆಳಿಗ್ಗೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡಿದ ಲತಾ ಮಲ್ಲಿಕಾರ್ಜುನ್‌ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದರು. ಸುರ್ಜೇವಾಲ ಅವರ ಸೂಚನೆ ಮೇರೆಗೆ ಶಾಸಕಾಂಗ ಸಭೆಗೆ ಆಗಮಿಸಿದ್ದಾರೆ.

ಲಿಂಗಾಯಿತ ನಾಯಕರಿಗೆ ಹೆಚ್ಚಿನ ಅವಕಾಶ

ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್‌ ನಾಯಕ ಈಶ್ವರ ಖಂಡ್ರೆ ಮಾತನಾಡಿ, ಲಿಂಗಾಯತ ಸಮುದಾಯದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟಿದೆ. ಈ ನಿಟ್ಟಿನಲ್ಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಯಕತ್ವ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

35 mins ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

3 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

14 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

16 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

16 hours ago