ಬೆಂಗಳೂರು: ಸಿಎಲ್ ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಬೆಂಬಲಿಗರು ಡಿಕೆಶಿ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಯಾರು ಎಂಬ ಕುರಿತಾಗಿ ಶಾಸಕರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ.
ಒಂದು ಕಡೆಯಲ್ಲಿ ಸಿಎಲ್ ಪಿ ಸಭೆ ನಡೆಯುತ್ತಿದ್ದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರ ಘೋಷಣೆ ಜೋರಾಗಿದೆ. ಡಿಕೆಶಿ ಬೆಂಬಲಿಗರು ಡಿಕೆ ಡಿಕೆ ಎಂದು ಘೋಷಣೆ ಕೂಗುತ್ತಿದ್ದಾರೆ ಮತ್ತೊಂದು ಕಡೆಯಲ್ಲಿ ಸಿದ್ದು ಸಿದ್ದು ಎಂದು ಸಿದ್ದರಾಮಯ್ಯ ಕಡೆಯವರು ಘೋಷಣೆ ಕೂಗುತ್ತಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಸಿಎಂ ಯಾರು ಆಗಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡು ಶಕ್ತಿಗಳು ಇದ್ದಂತೆ ಎಂದರು. ಇನ್ನು ಸಚಿವ ಸ್ಥಾನ ವಿಚಾರವಾಗಿ ಮಾತನಾಡಿ, ನಾನು ಸನ್ಯಾಸಿ ಅಲ್ಲ, ಆದರೆ ರಾಜ್ಯ ನಾಯಕರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಕಡಿಮೆ ಸೀಟು ಬಂದಿದ್ದರೆ ಆಪರೇಷನ್ ಕಮಲ ಮಾಡುತ್ತಿದ್ದರು ಬಿಜೆಪಿಯವರು ಎಂದು ಬಿಜೆಪಿ ವಿರುದ್ಧನೂ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಆಗಮಿಸಿದ್ದಾರೆ. ಭಾನುವಾರ ಬೆಳಿಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡಿದ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದರು. ಸುರ್ಜೇವಾಲ ಅವರ ಸೂಚನೆ ಮೇರೆಗೆ ಶಾಸಕಾಂಗ ಸಭೆಗೆ ಆಗಮಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಮಾತನಾಡಿ, ಲಿಂಗಾಯತ ಸಮುದಾಯದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟಿದೆ. ಈ ನಿಟ್ಟಿನಲ್ಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಯಕತ್ವ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…