BREAKING NEWS

ಶಾಂಘ್ರಿಲಾ ಹೋಟೆಲ್‌ ಮುಂದೆ ಹೈಡ್ರಾಮಾ; ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಕಾರ್ಯಕರ್ತರು ಪಟ್ಟು!

ಬೆಂಗಳೂರು: ಸಿಎಲ್ ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಬೆಂಬಲಿಗರು ಡಿಕೆಶಿ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಯಾರು ಎಂಬ ಕುರಿತಾಗಿ ಶಾಸಕರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ.

ಒಂದು ಕಡೆಯಲ್ಲಿ ಸಿಎಲ್ ಪಿ ಸಭೆ ನಡೆಯುತ್ತಿದ್ದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ‌ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರ ಘೋಷಣೆ ಜೋರಾಗಿದೆ. ಡಿಕೆಶಿ ಬೆಂಬಲಿಗರು ಡಿಕೆ ಡಿಕೆ ಎಂದು ಘೋಷಣೆ ಕೂಗುತ್ತಿದ್ದಾರೆ ಮತ್ತೊಂದು ಕಡೆಯಲ್ಲಿ ಸಿದ್ದು ಸಿದ್ದು ಎಂದು ಸಿದ್ದರಾಮಯ್ಯ ಕಡೆಯವರು ಘೋಷಣೆ ಕೂಗುತ್ತಿದ್ದಾರೆ.

ಸಿದ್ದು-ಡಿಕೆಶಿ ಎರಡು ಶಕ್ತಿ ಇದ್ದಂತೆ; ನಾನೇನು ಸನ್ಯಾಸಿ ಅಲ್ಲ

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಸಿಎಂ ಯಾರು ಆಗಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು‌. ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡು ಶಕ್ತಿಗಳು ಇದ್ದಂತೆ ಎಂದರು. ಇನ್ನು ಸಚಿವ ಸ್ಥಾನ ವಿಚಾರವಾಗಿ ಮಾತನಾಡಿ, ನಾನು ಸನ್ಯಾಸಿ ಅಲ್ಲ, ಆದರೆ ರಾಜ್ಯ ನಾಯಕರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಕಡಿಮೆ ಸೀಟು ಬಂದಿದ್ದರೆ ಆಪರೇಷನ್ ಕಮಲ ಮಾಡುತ್ತಿದ್ದರು ಬಿಜೆಪಿಯವರು ಎಂದು ಬಿಜೆಪಿ ವಿರುದ್ಧನೂ ವಾಗ್ದಾಳಿ ನಡೆಸಿದರು.

ಪಕ್ಷೇತರ ಅಭ್ಯರ್ಥಿ ಕೂಡಾ ಭಾಗಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಆಗಮಿಸಿದ್ದಾರೆ. ಭಾನುವಾರ ಬೆಳಿಗ್ಗೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡಿದ ಲತಾ ಮಲ್ಲಿಕಾರ್ಜುನ್‌ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದರು. ಸುರ್ಜೇವಾಲ ಅವರ ಸೂಚನೆ ಮೇರೆಗೆ ಶಾಸಕಾಂಗ ಸಭೆಗೆ ಆಗಮಿಸಿದ್ದಾರೆ.

ಲಿಂಗಾಯಿತ ನಾಯಕರಿಗೆ ಹೆಚ್ಚಿನ ಅವಕಾಶ

ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್‌ ನಾಯಕ ಈಶ್ವರ ಖಂಡ್ರೆ ಮಾತನಾಡಿ, ಲಿಂಗಾಯತ ಸಮುದಾಯದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟಿದೆ. ಈ ನಿಟ್ಟಿನಲ್ಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಯಕತ್ವ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

9 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

11 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

13 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

13 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

15 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

15 hours ago