ಬೆಂಗಳೂರು: ಸಿಎಲ್ ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಬೆಂಬಲಿಗರು ಡಿಕೆಶಿ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಯಾರು ಎಂಬ ಕುರಿತಾಗಿ ಶಾಸಕರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ.
ಒಂದು ಕಡೆಯಲ್ಲಿ ಸಿಎಲ್ ಪಿ ಸಭೆ ನಡೆಯುತ್ತಿದ್ದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರ ಘೋಷಣೆ ಜೋರಾಗಿದೆ. ಡಿಕೆಶಿ ಬೆಂಬಲಿಗರು ಡಿಕೆ ಡಿಕೆ ಎಂದು ಘೋಷಣೆ ಕೂಗುತ್ತಿದ್ದಾರೆ ಮತ್ತೊಂದು ಕಡೆಯಲ್ಲಿ ಸಿದ್ದು ಸಿದ್ದು ಎಂದು ಸಿದ್ದರಾಮಯ್ಯ ಕಡೆಯವರು ಘೋಷಣೆ ಕೂಗುತ್ತಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಸಿಎಂ ಯಾರು ಆಗಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡು ಶಕ್ತಿಗಳು ಇದ್ದಂತೆ ಎಂದರು. ಇನ್ನು ಸಚಿವ ಸ್ಥಾನ ವಿಚಾರವಾಗಿ ಮಾತನಾಡಿ, ನಾನು ಸನ್ಯಾಸಿ ಅಲ್ಲ, ಆದರೆ ರಾಜ್ಯ ನಾಯಕರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಕಡಿಮೆ ಸೀಟು ಬಂದಿದ್ದರೆ ಆಪರೇಷನ್ ಕಮಲ ಮಾಡುತ್ತಿದ್ದರು ಬಿಜೆಪಿಯವರು ಎಂದು ಬಿಜೆಪಿ ವಿರುದ್ಧನೂ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಆಗಮಿಸಿದ್ದಾರೆ. ಭಾನುವಾರ ಬೆಳಿಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡಿದ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದರು. ಸುರ್ಜೇವಾಲ ಅವರ ಸೂಚನೆ ಮೇರೆಗೆ ಶಾಸಕಾಂಗ ಸಭೆಗೆ ಆಗಮಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಮಾತನಾಡಿ, ಲಿಂಗಾಯತ ಸಮುದಾಯದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟಿದೆ. ಈ ನಿಟ್ಟಿನಲ್ಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಯಕತ್ವ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…