BREAKING NEWS

ನಾನು ನರೇಂದ್ರ ಮೋದಿ ಅವರ ದೊಡ್ಡ ಅಭಿಮಾನಿ: ಎಲಾನ್‌ ಮಸ್ಕ್

ನ್ಯೂಯಾರ್ಕ್:‌ ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ (ಜೂನ್‌ 21) ಟೆಸ್ಲಾ ಕಂಪನಿ ಸಿಇಒ, ಟ್ವೀಟರ್‌ ಮಾಲೀಕ ಎಲಾನ್‌ ಮಸ್ಕ್‌ ಅವರನ್ನು ಭೇಟಿಯಾಗಿದ್ದು, ನಾನು ನರೇಂದ್ರ ಮೋದಿ ಅವರ ಅಭಿಮಾನಿಯಾಗಿದ್ದೇನೆ ಎಂದು ಮಸ್ಕ್‌ ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರೊಂದಿಗಿನ ಅದ್ಭುತ ಮಾತುಕತೆಯಾಗಿದ್ದು, ನಾನು ಅವರನ್ನು ತುಂಬಾ ಇಷ್ಟಪಡುತ್ತೇನೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಹಾಗಾಗಿ ನಾವು ಅಪರಿಚಿತರಲ್ಲ. ಭಾರತದ ಭವಿಷ್ಯದ ಬಗ್ಗೆ ನಾನು ತುಂಬಾ ಉತ್ಸುಕನಾಗಿದ್ದೇನೆ. ಜಗತ್ತಿನ ಎಲ್ಲಾ ದೇಶಕ್ಕಿಂತಲೂ ಭಾರತವು ಹೆಚ್ಚು ಭರವಸೆಯ ರಾಷ್ಟ್ರವಾಗಿದೆ ಎಂದು ಭಾವಿಸುತ್ತೇನೆ” ಎಂದು ಮಸ್ಕ್‌ ಶ್ಲಾಘಿಸಿದ್ದಾರೆ.

ಭಾರತದಲ್ಲಿ ಟೆಸ್ಲಾ ಕಂಪನಿ ಆರಂಭಿಸುವ ಯೋಜನೆ ಇದೆಯಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಎಲಾನ್‌ ಮಸ್ಕ್‌ ಅವರು, ಖಂಡಿತವಾಗಿಯೂ ಟೆಸ್ಲಾ ಭಾರತದಲ್ಲಿ ಶೀಘ್ರದಲ್ಲೇ ಕಾರ್ಯಾರಂಭಿಸಲಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ದೇಶದ(ಭಾರತ) ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದಾರೆ. ಅಷ್ಟೇ ಅಲ್ಲ ಭಾರತದಲ್ಲಿ ಹೂಡಿಕೆ ಮಾಡುವಂತೆಯೂ ಮನವಿ ಮಾಡಿಕೊಂಡಿದ್ದಾರೆ. ನಾವು ಆ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಮಸ್ಕ್‌ ಹೇಳಿದರು.

2015ರ ಅಮೆರಿಕದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಲಿಫೋರ್ನಿಯಾದಲ್ಲಿರುವ ಟೆಸ್ಲಾ ಮೋಟಾರ್ಸ್‌ ಫ್ಯಾಕ್ಟರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

andolanait

Recent Posts

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

11 mins ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

12 mins ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

38 mins ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

1 hour ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

1 hour ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

1 hour ago