ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ. ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು ಇದರ ಮಧ್ಯೆ ಜನಸಂಖ್ಯೆ ಆಧಾರಿತವಾಗಿ ಮದ್ಯದಂಗಡಿ ಹೆಚ್ಚಳಕ್ಕೆ ಸರ್ಕಾರದ ಭಾಗವಾದರೂ ನಾನು ವಿರೋಧ ಇದ್ದೇನೆ ಎಂದರು.
ಮಹಿಳೆಯರು ಕೂಡ ಇದನ್ನ ಇಷ್ಟಪಡಲ್ಲ. ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ. ಇಂತಹ ನಿರ್ಧಾರಕ್ಕೆ ನಮ್ಮ ವಿರೋಧ ಇದೆ. ಸಿಎಂ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ರಾವಣ, ಕೀಚಕ ಅನ್ನೋದು ಬಿಜೆಪಿಯವರ ಸಂಸ್ಕೃತಿಯನ್ನ ತೋರಿಸುತ್ತೆ. ಬಿಜೆಪಿಯವರು ರಾಮ ಅಂತಾರೆ ಬಾಯಿ ತೆಗೆದರೆ ರಾಮನ ಬಗ್ಗೆ ಮಾತನಾಡ್ತಾರೆ ರಾವಣನ ಕಾಯಕ ಮಾಡುತ್ತಾರೆ ಎಂದು ಹೇಳಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…