BREAKING NEWS

ಮದ್ಯದಂಗಡಿ ಹೆಚ್ಚಳಕ್ಕೆ ನನ್ನ ವಿರೋಧವಿದೆ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ. ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು ಇದರ ಮಧ್ಯೆ ಜನಸಂಖ್ಯೆ ಆಧಾರಿತವಾಗಿ ಮದ್ಯದಂಗಡಿ ಹೆಚ್ಚಳಕ್ಕೆ ಸರ್ಕಾರದ ಭಾಗವಾದರೂ ನಾನು ವಿರೋಧ ಇದ್ದೇನೆ ಎಂದರು.

ಮಹಿಳೆಯರು ಕೂಡ ಇದನ್ನ ಇಷ್ಟಪಡಲ್ಲ. ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ. ಇಂತಹ ನಿರ್ಧಾರಕ್ಕೆ ನಮ್ಮ ವಿರೋಧ ಇದೆ. ಸಿಎಂ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ರಾವಣ, ಕೀಚಕ ಅನ್ನೋದು ಬಿಜೆಪಿಯವರ ಸಂಸ್ಕೃತಿಯನ್ನ ತೋರಿಸುತ್ತೆ. ಬಿಜೆಪಿಯವರು ರಾಮ ಅಂತಾರೆ ಬಾಯಿ ತೆಗೆದರೆ ರಾಮನ ಬಗ್ಗೆ ಮಾತನಾಡ್ತಾರೆ ರಾವಣನ ಕಾಯಕ ಮಾಡುತ್ತಾರೆ ಎಂದು ಹೇಳಿದರು.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago