BREAKING NEWS

ನಾನು ಸನಾತನವಾದವನ್ನು ಎಂದೆಂದಿಗೂ ವಿರೋಧಿಸುತ್ತೇನೆ: ಉದಯನಿಧಿ ಪುನರುಚ್ಚಾರ

ಚೆನ್ನೈ : ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಪಿ.ಕೆ.ಶೇಖರ್ ಬಾಬು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಯ ಕುರಿತು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿರುವ ಪೊಲೀಸರನ್ನು ಮದ್ರಾಸ್ ಹೈಕೋರ್ಟ್ ಟೀಕಿಸಿದ ಬೆನ್ನಿಗೇ, ಸನಾತನ ಧರ್ಮದ ಕುರಿತ ತಮ್ಮ ನಿಲುವನ್ನು ಸಚಿವ ಉದಯನಿಧಿ ಸ್ಟಾಲಿನ್ ಸೋಮವಾರ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ ಎಂದು indiatoday.in ವರದಿ ಮಾಡಿದೆ.

ಇದಕ್ಕೂ ಮುನ್ನ, ಯಾವುದೇ ವ್ಯಕ್ತಿ ವಿಭಜನಾತ್ಮಕ ಯೋಜನೆಗಳನ್ನು ಅಥವಾ ಯಾವುದೇ ಸಿದ್ಧಾಂತದ ನಿರ್ಮೂಲನೆಗಾಗಿ ಪ್ರಚೋದಿಸುವ ಹಕ್ಕು ಹೊಂದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿತ್ತು.

ಈ ಮುನ್ನ, ಸನಾತನ ಧರ್ಮವನ್ನು ಡೆಂಗ್ಯೂ ಹಾಗೂ ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್, ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಹಾಗೂ ಕಾನೂನು ಪರಿಣಾಮಗಳನ್ನು ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

“ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನಾನು ಏನು ಹೇಳಿದ್ದೆ ಅದು ಸರಿಯಿದೆ ಹಾಗೂ ನಾನು ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನಾನು ನನ್ನ ಹೇಳಿಕೆಯನ್ನು ಬದಲಿಸುವುದಿಲ್ಲ. ಅಂಬೇಡ್ಕರ್, ಪೆರಿಯಾರ್ ಅಥವಾ ತಿರುಮವಲನ್ ಹೇಳಿರುವುದಕ್ಕಿಂತ ಭಿನ್ನವಾಗಿ ನಾನೇನನ್ನೂ ಹೇಳಿಲ್ಲ. ನಾನೀಗ ಶಾಸಕ, ಸಚಿವ ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿರಬಹುದು. ನಾಳೆ ನಾನು ಅದೇನೂ ಅಲ್ಲದೆ ಇರಬಹುದು. ಆದರೆ, ಮನುಷ್ಯನಾಗಿರುವುದು ಬಹಳ ಮುಖ್ಯ” ಎಂದು ಅವರು ಪ್ರತಿಪಾದಿಸಿದ್ದಾರೆ.

“ನೀಟ್ ಆರು ವರ್ಷದ ಸಮಸ್ಯೆಯಾಗಿದ್ದರೆ, ಸನಾತನ ಧರ್ಮದ ಸಮಸ್ಯೆ ಕುರಿತು ಹಲವಾರು ವರ್ಷಗಳಿಂದ ನಾವೆಲ್ಲ ಮಾತನಾಡುತ್ತಿದ್ದೇವೆ. ಸನಾತನ ಧರ್ಮದ ಸಮಸ್ಯೆಯು ಹಲವಾರು ನೂರು ವರ್ಷಗಳಷ್ಟು ಹಳೆಯದಾಗಿದ್ದು, ನಾವದನ್ನು ಎಂದೆಂದಿಗೂ ವಿರೋಧಿಸಲೇಬೇಕು” ಎಂದು ಡಿಎಂಕೆ ನಾಯಕರೂ ಆದ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿರುವುದರಿಂದ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಉದಯನಿಧಿ ಸ್ಟಾಲಿನ್ ಕರೆ ನೀಡಿದ್ದರು.

andolanait

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

2 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

2 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

2 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

7 hours ago