BREAKING NEWS

ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ : ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ

ಬೆಂಗಳೂರು : ಟಿಕೆಟ್ ಕೈತಪ್ಪಿದ ಕಾರಣದಿಂದ ಬೇಸತ್ತುಕೊಂಡಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಅಭಿಯಾನಿಗಳ ಜೊತೆಗೆ ಸಭೆ ನಡೆಸಿ ತಮ್ಮ ಮುಂದಿನ ನಿರ್ಧಾರವನ್ನು ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.
ಮೂಡಿಗೆರೆ ಕ್ಷೇತ್ರದಲ್ಲಿ ಎಂಪಿ ಕುಮಾರಸ್ವಾಮಿ ವಿರುದ್ಧ ಬಿಜೆಪಿಯಲ್ಲೇ ಬಂಡಾಯ ಎದ್ದಿತ್ತು. ಶಾಸಕರ ಕಾರ್ಯವೈಖರಿಯ ಬಗ್ಗೆ ಒಂದು ಬಣದ ತೀವ್ರ ವಿರೋಧ ಇತ್ತು. ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಸಮ್ಮುಖದಲ್ಲಿಯೇ ಎಂಪಿ ಕುಮಾರಸ್ವಾಮಿ ವಿರುದ್ಧ ಒಂದು ಬಣದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದರು. ಎಂಪಿ ಕುಮಾರಸ್ವಾಮಿ ಬದಲಾಗಿ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.

ರಾಜೀನಾಮೆ ಪತ್ರದಲ್ಲಿ ಏನಿದೆ : ಪಕ್ಷದಲ್ಲಿನ ಕೆಲವು ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಕೋರಿಕೆಯನ್ನು ಅಂಗೀಕರಿಸಬೆಕಾಗಿ ವಿನಂತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎಂಪಿ ಕುಮಾರಸ್ವಾಮಿ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ‘ಈಗಾಗಲೇ ಸಾಕಷ್ಟು ಅಭಿಮಾನಿಗಳು ಮನೆಗೆ ಬಂದಿದ್ದಾರೆ. ಅವರ ಜೊತೆಗೆ ಸಭೆ ನಡೆಸಿ ಶುಕ್ರವಾರ ಒಂದು ನಿರ್ಧಾರವನ್ನು ಕೈಗೊಳ್ಳುತ್ತೇನೆ’ ಎಂದರು.

ನಾನೇನು ಸನ್ಯಾಸಿ ಅಲ್ಲ : ಇನ್ನೂ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಎಂಪಿ ಕುಮಾರಸ್ವಾಮಿ, ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವೂ ಗೆಲ್ಲುವುದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತಿಳಿಸುತ್ತೇನೆ. ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಆಕ್ರೋಶ ಹೊರಹಾಕಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ, ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಕ್ಷೇತ್ರದ ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು ಹೈಕಮಾಂಡ್‌ಗೆ ತಪ್ಪಾಗಿ ಕಂಡಿದೆ. ಇದು ಪರಮಾಶ್ಚರ್ಯ, ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದ ಪ್ರತಿ ಸರ್ವೇಯಲ್ಲಿಯೂ ಮುನ್ನಡೆಯಿದ್ದೆ. ಆದರೂ ಟಿಕೆಟ್‌ ನಿರಾಕರಿಸಿರುವುದು ನೋವಿನ ವಿಚಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅದಲ್ಲದೇ ಜೆಡಿಎಸ್‌ನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ.

ಬಿಜೆಪಿಯಲ್ಲಿ ಬಂಡಾಯ.. ಬಂಡಾಯ.. : ಚುನಾವಣೆಗೆ ಟಿಕೆಟ್‌ ಘೋಷಣೆ ಬೆನ್ನಲ್ಲಿಯೇ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿದೆ. ಇದುವರೆಗೂ ಎರಡು ಪಟ್ಟಿಯಲ್ಲಿ 212 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿರುವ ಬಿಜೆಪಿ ಬಂಡಾಯವನ್ನು ಎದುರಿಸುತ್ತಿದೆ. ಟಿಕೆಟ್‌ ವಂಚಿತ ಹಲವರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಅದಲ್ಲದೇ ಪಕ್ಷೇತರರಾಗಿ ಸ್ಪರ್ಧೆಗೂ ಮುಂದಾಗಿದ್ದಾರೆ. ಈಗಾಗಲೇ ಪ್ರಮುಖವಾಗಿ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸ್ತಾರೆ ಎನ್ನಲಾಗಿದೆ. ಕೆಎಸ್‌ ಈಶ್ವರಪ್ಪ, ಎಸ್‌ ಅಂಗಾರ ಸೇರಿ ಹಲವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

lokesh

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

10 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

10 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

10 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

11 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

11 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

13 hours ago