ಬೆಂಗಳೂರು : ಟಿಕೆಟ್ ಕೈತಪ್ಪಿದ ಕಾರಣದಿಂದ ಬೇಸತ್ತುಕೊಂಡಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಅಭಿಯಾನಿಗಳ ಜೊತೆಗೆ ಸಭೆ ನಡೆಸಿ ತಮ್ಮ ಮುಂದಿನ ನಿರ್ಧಾರವನ್ನು ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.
ಮೂಡಿಗೆರೆ ಕ್ಷೇತ್ರದಲ್ಲಿ ಎಂಪಿ ಕುಮಾರಸ್ವಾಮಿ ವಿರುದ್ಧ ಬಿಜೆಪಿಯಲ್ಲೇ ಬಂಡಾಯ ಎದ್ದಿತ್ತು. ಶಾಸಕರ ಕಾರ್ಯವೈಖರಿಯ ಬಗ್ಗೆ ಒಂದು ಬಣದ ತೀವ್ರ ವಿರೋಧ ಇತ್ತು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿಯೇ ಎಂಪಿ ಕುಮಾರಸ್ವಾಮಿ ವಿರುದ್ಧ ಒಂದು ಬಣದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದರು. ಎಂಪಿ ಕುಮಾರಸ್ವಾಮಿ ಬದಲಾಗಿ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ರಾಜೀನಾಮೆ ಪತ್ರದಲ್ಲಿ ಏನಿದೆ : ಪಕ್ಷದಲ್ಲಿನ ಕೆಲವು ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಕೋರಿಕೆಯನ್ನು ಅಂಗೀಕರಿಸಬೆಕಾಗಿ ವಿನಂತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎಂಪಿ ಕುಮಾರಸ್ವಾಮಿ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ‘ಈಗಾಗಲೇ ಸಾಕಷ್ಟು ಅಭಿಮಾನಿಗಳು ಮನೆಗೆ ಬಂದಿದ್ದಾರೆ. ಅವರ ಜೊತೆಗೆ ಸಭೆ ನಡೆಸಿ ಶುಕ್ರವಾರ ಒಂದು ನಿರ್ಧಾರವನ್ನು ಕೈಗೊಳ್ಳುತ್ತೇನೆ’ ಎಂದರು.
ನಾನೇನು ಸನ್ಯಾಸಿ ಅಲ್ಲ : ಇನ್ನೂ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಎಂಪಿ ಕುಮಾರಸ್ವಾಮಿ, ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವೂ ಗೆಲ್ಲುವುದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತಿಳಿಸುತ್ತೇನೆ. ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಆಕ್ರೋಶ ಹೊರಹಾಕಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ, ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಕ್ಷೇತ್ರದ ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು ಹೈಕಮಾಂಡ್ಗೆ ತಪ್ಪಾಗಿ ಕಂಡಿದೆ. ಇದು ಪರಮಾಶ್ಚರ್ಯ, ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದ ಪ್ರತಿ ಸರ್ವೇಯಲ್ಲಿಯೂ ಮುನ್ನಡೆಯಿದ್ದೆ. ಆದರೂ ಟಿಕೆಟ್ ನಿರಾಕರಿಸಿರುವುದು ನೋವಿನ ವಿಚಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅದಲ್ಲದೇ ಜೆಡಿಎಸ್ನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ.
ಬಿಜೆಪಿಯಲ್ಲಿ ಬಂಡಾಯ.. ಬಂಡಾಯ.. : ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲಿಯೇ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿದೆ. ಇದುವರೆಗೂ ಎರಡು ಪಟ್ಟಿಯಲ್ಲಿ 212 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿರುವ ಬಿಜೆಪಿ ಬಂಡಾಯವನ್ನು ಎದುರಿಸುತ್ತಿದೆ. ಟಿಕೆಟ್ ವಂಚಿತ ಹಲವರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಅದಲ್ಲದೇ ಪಕ್ಷೇತರರಾಗಿ ಸ್ಪರ್ಧೆಗೂ ಮುಂದಾಗಿದ್ದಾರೆ. ಈಗಾಗಲೇ ಪ್ರಮುಖವಾಗಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ನಿಂದ ಸ್ಪರ್ಧಿಸ್ತಾರೆ ಎನ್ನಲಾಗಿದೆ. ಕೆಎಸ್ ಈಶ್ವರಪ್ಪ, ಎಸ್ ಅಂಗಾರ ಸೇರಿ ಹಲವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…