ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ.
ನಗರದಲ್ಲಿ ಸ್ವಾಭಿಮಾನಿ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದ್ರೆ ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದು ಹೇಳುವ ಮೂಲಕ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.
ಸಂಸದೆಯ ಸ್ಥಾನ ಇಂದು ಇರುತ್ತದೆ ಆಳೆ ಹೋಗುತ್ತೆ ಆದರೆ ಮಂಡ್ಯ ಸೊಸೆ ಎಂಬ ಸ್ಥಾನವನ್ನು ಯಾರು ನನ್ನಿಂದ ಕಿತ್ತುಕೊಳ್ಳು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಇಂದು ಸಂಸದೆ ಆಗಿರಬಹುದು ನಾಳೆ ಇನ್ನೋಂದು ಹುದ್ದೆ ಅಲಂಕರಿಸಬಹುದು. ನಾನು ಯಾವುದೇ ಹುದ್ದೆಯಲ್ಲಿದ್ದರು ಸದಾ ಮಂಡ್ಯ ಜಿಲ್ಲೆಯ ಅಭಿವೃದ್ದಿಗಾಗಿ ದುಡಿಯುತ್ತೇನೆ ಎಂದರು.
ಬಿಜೆಪಿಗೆ ಬೆಂಬಲ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮೂಲಕ ಮೈತ್ರಿ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ತಾವು ಬಿಜೆಪಿ ಪಕ್ಷಕ್ಕೆ ಸೇರುತ್ತಿರುವುದಾಗಿ ಘೋಷಣೆ ಮಾಡುವುದಾಗಿ ತಿಳಿಸಿದರು.
ಮೋದಿ ನಾಯಕತ್ವ ಮೆಚ್ಚಿಕೊಳ್ಳಬೇಕು : ಅಭಿವೃದ್ದಿಯೇ ನನ್ನ ಮೂಲ ಮಂತ್ರ ಎಂದು ಹೇಳಿಕೋಡು ಮುನ್ನುಗುತ್ತಿರುವ ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಎಂದು ಸ್ವಾರ್ಥ ರಾಜಕಾರಣ ಮಾಡಿಲ್ಲ. ಅಂಥಾ ನಾಯಕತ್ವವನ್ನು ನಾವು ಮೆಚ್ಚಿಕೊಳ್ಳಬೇಕು. ಅಂಥಾ ನಾಯಕರ ಜೊತೆ ಕೆಲಸ ಮಾಡಿದಾಗ ನಾನು ನಮ್ಮ ಜಿಲ್ಲೆಗೆ ಸಾಕಷ್ಟ ಕೊಡುಗೆಗಳನ್ನು ತರಬಹುದು ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…