ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭಾನುವಾರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಮೈಲ್ಡ್ ಸ್ಟ್ರೋಕ್ ನಿಂದ ಕುಮಾರಸ್ವಾಮಿಯವರು ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೂಡಲೇ ವೈದ್ಯರು ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ದು, ಇದೀಗ ಎಚ್ಡಿಕೆ ಗುಣಮುಖರಾಗಿ ಇಂದು ಬಿಡುಗಡೆ ಹೊಂದಿದ್ದಾರೆ.
ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ದೇವರ ಮತ್ತು ತಂದೆ ತಾಯಿ ಆಶೀರ್ವಾದದಿಂದ ಗುಣಮುಖನಾಗಿ ಇಂದು ಬಿಡುಗಡೆ ಹೊಂದಿದ್ದೇನೆ. ಈ ಹಿಂದೆಯೂ ನಾನು ತೀವ್ರ ಅನಾರೋಗ್ಯಕ್ಕೀಡಾಗಿದ್ದೆ. ಗುಣಮುಖನಾಗಿ ಹೊರಬಂದೆ, ಇಂದು ಮತ್ತೆ ಗುಣಮುಖನಾಗಿದ್ದೇನೆ. ಭಗವಂತ ನನಗೆ ಮೂರನೇ ಜನ್ಮ ನೀಡಿದ್ದಾನೆ ಎಂದರು.
ಭಗವಂತನ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ದೇವರು, ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ ಐದು ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ. ಮೊದಲು ಫ್ಯಾಮಿಲಿ ವೈದ್ಯರಾದ ಡಾ.ಮಂಜುನಾಥ್ ಅವರಿಗೆ ಕರೆ ಮಾಡಿದ್ದೆ, ನಂತರ ಅಪೋಲೊ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದೆ. ಅಪೋಲೊ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…