ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭಾನುವಾರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಮೈಲ್ಡ್ ಸ್ಟ್ರೋಕ್ ನಿಂದ ಕುಮಾರಸ್ವಾಮಿಯವರು ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೂಡಲೇ ವೈದ್ಯರು ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ದು, ಇದೀಗ ಎಚ್ಡಿಕೆ ಗುಣಮುಖರಾಗಿ ಇಂದು ಬಿಡುಗಡೆ ಹೊಂದಿದ್ದಾರೆ.
ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ದೇವರ ಮತ್ತು ತಂದೆ ತಾಯಿ ಆಶೀರ್ವಾದದಿಂದ ಗುಣಮುಖನಾಗಿ ಇಂದು ಬಿಡುಗಡೆ ಹೊಂದಿದ್ದೇನೆ. ಈ ಹಿಂದೆಯೂ ನಾನು ತೀವ್ರ ಅನಾರೋಗ್ಯಕ್ಕೀಡಾಗಿದ್ದೆ. ಗುಣಮುಖನಾಗಿ ಹೊರಬಂದೆ, ಇಂದು ಮತ್ತೆ ಗುಣಮುಖನಾಗಿದ್ದೇನೆ. ಭಗವಂತ ನನಗೆ ಮೂರನೇ ಜನ್ಮ ನೀಡಿದ್ದಾನೆ ಎಂದರು.
ಭಗವಂತನ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ದೇವರು, ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ ಐದು ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ. ಮೊದಲು ಫ್ಯಾಮಿಲಿ ವೈದ್ಯರಾದ ಡಾ.ಮಂಜುನಾಥ್ ಅವರಿಗೆ ಕರೆ ಮಾಡಿದ್ದೆ, ನಂತರ ಅಪೋಲೊ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದೆ. ಅಪೋಲೊ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…