ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭಾನುವಾರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಮೈಲ್ಡ್ ಸ್ಟ್ರೋಕ್ ನಿಂದ ಕುಮಾರಸ್ವಾಮಿಯವರು ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೂಡಲೇ ವೈದ್ಯರು ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ದು, ಇದೀಗ ಎಚ್ಡಿಕೆ ಗುಣಮುಖರಾಗಿ ಇಂದು ಬಿಡುಗಡೆ ಹೊಂದಿದ್ದಾರೆ.
ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ದೇವರ ಮತ್ತು ತಂದೆ ತಾಯಿ ಆಶೀರ್ವಾದದಿಂದ ಗುಣಮುಖನಾಗಿ ಇಂದು ಬಿಡುಗಡೆ ಹೊಂದಿದ್ದೇನೆ. ಈ ಹಿಂದೆಯೂ ನಾನು ತೀವ್ರ ಅನಾರೋಗ್ಯಕ್ಕೀಡಾಗಿದ್ದೆ. ಗುಣಮುಖನಾಗಿ ಹೊರಬಂದೆ, ಇಂದು ಮತ್ತೆ ಗುಣಮುಖನಾಗಿದ್ದೇನೆ. ಭಗವಂತ ನನಗೆ ಮೂರನೇ ಜನ್ಮ ನೀಡಿದ್ದಾನೆ ಎಂದರು.
ಭಗವಂತನ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ದೇವರು, ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ ಐದು ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ. ಮೊದಲು ಫ್ಯಾಮಿಲಿ ವೈದ್ಯರಾದ ಡಾ.ಮಂಜುನಾಥ್ ಅವರಿಗೆ ಕರೆ ಮಾಡಿದ್ದೆ, ನಂತರ ಅಪೋಲೊ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದೆ. ಅಪೋಲೊ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…