ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭಾನುವಾರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಮೈಲ್ಡ್ ಸ್ಟ್ರೋಕ್ ನಿಂದ ಕುಮಾರಸ್ವಾಮಿಯವರು ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೂಡಲೇ ವೈದ್ಯರು ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ದು, ಇದೀಗ ಎಚ್ಡಿಕೆ ಗುಣಮುಖರಾಗಿ ಇಂದು ಬಿಡುಗಡೆ ಹೊಂದಿದ್ದಾರೆ.
ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ದೇವರ ಮತ್ತು ತಂದೆ ತಾಯಿ ಆಶೀರ್ವಾದದಿಂದ ಗುಣಮುಖನಾಗಿ ಇಂದು ಬಿಡುಗಡೆ ಹೊಂದಿದ್ದೇನೆ. ಈ ಹಿಂದೆಯೂ ನಾನು ತೀವ್ರ ಅನಾರೋಗ್ಯಕ್ಕೀಡಾಗಿದ್ದೆ. ಗುಣಮುಖನಾಗಿ ಹೊರಬಂದೆ, ಇಂದು ಮತ್ತೆ ಗುಣಮುಖನಾಗಿದ್ದೇನೆ. ಭಗವಂತ ನನಗೆ ಮೂರನೇ ಜನ್ಮ ನೀಡಿದ್ದಾನೆ ಎಂದರು.
ಭಗವಂತನ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ದೇವರು, ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ ಐದು ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ. ಮೊದಲು ಫ್ಯಾಮಿಲಿ ವೈದ್ಯರಾದ ಡಾ.ಮಂಜುನಾಥ್ ಅವರಿಗೆ ಕರೆ ಮಾಡಿದ್ದೆ, ನಂತರ ಅಪೋಲೊ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದೆ. ಅಪೋಲೊ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…