BREAKING NEWS

‘ಸಿದ್ದರಾಮಯ್ಯ ಎಂಬ ನಾನು’: ಸಿದ್ದರಾಮಯ್ಯ ಕುರಿತು ಮತ್ತೊಂದು ಸಿನಿಮಾ ಘೋಷಣೆ

ಬೆಂಗಳೂರು : ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾಗಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಎಂಬ ನಾನು’ ಹೆಸರಿನಲ್ಲಿ ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ನಾಗರಾಜು ಬಿ. ಈಗಾಗಲೇ ತಮ್ಮ ಸಿನಿಮಾದ ಪೋಸ್ಟರ್ ಅನ್ನು ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರ ಜೀವನವನ್ನು ಆಧರಿಸಿ ಚಿತ್ರ ಮಾಡುವುದಾಗಿ ಸತ್ಯರತ್ನಂ ಎನ್ನುವವರು ಹೇಳಿಕೊಂಡಿದ್ದರು. ಈ ಸಿನಿಮಾದಲ್ಲಿ ‘ಲೀಡರ್ ರಾಮಯ್ಯ’ ಎಂದು ಹೆಸರಿಟ್ಟಿದ್ದರು. ರಾಮನವಮಿಯ ದಿನದಂದು ಸಿನಿಮಾದ ಪೋಸ್ಟರ್ ಅನ್ನು ಸಿದ್ದರಾಮಯ್ಯ ಅವರ ಬೆಂಗಳೂರಿನ ನಿವಾಸದಲ್ಲೇ ಬಿಡುಗಡೆ ಮಾಡಲಾಗಿತ್ತು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ತಯಾರಿಸುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು.

ಪೋಸ್ಟರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ, ಈವರೆಗೂ ಆ ಚಿತ್ರದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಅದು ಕೂಡ ಈವರೆಗೂ ಅಧಿಕೃತವಾಗಿಲ್ಲ. ಚುನಾವಣೆ, ನೀತಿಸಂಹಿತೆ ಕಾರಣದಿಂದಾಗಿ ಸಿನಿಮಾ ಶುರು ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಈ ಸಿನಿಮಾದ ಜೊತೆಗೆ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.

ಸಿದ್ದರಾಮಯ್ಯ ಎಂಬ ನಾನು ಚಿತ್ರತಂಡ ಹೇಳಿಕೊಂಡಂತೆ ಸದ್ಯದಲ್ಲೇ ಚಿತ್ರೀಕರಣ ಕೂಡ ಆರಂಭ ಮಾಡಲಿದ್ದಾರಂತೆ. ಆದರೆ ಈ ಕುರಿತು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ಮಾಡಿದ್ದರೋ ಅಥವಾ ಅವರಿಗೆ ಗೊತ್ತಾಗದಂತೆ ಸಿನಿಮಾ ಮಾಡುತ್ತಿದ್ದರೋ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.

lokesh

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

3 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

4 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago