ಬೆಂಗಳೂರು : ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾಗಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಎಂಬ ನಾನು’ ಹೆಸರಿನಲ್ಲಿ ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ನಾಗರಾಜು ಬಿ. ಈಗಾಗಲೇ ತಮ್ಮ ಸಿನಿಮಾದ ಪೋಸ್ಟರ್ ಅನ್ನು ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯನವರ ಜೀವನವನ್ನು ಆಧರಿಸಿ ಚಿತ್ರ ಮಾಡುವುದಾಗಿ ಸತ್ಯರತ್ನಂ ಎನ್ನುವವರು ಹೇಳಿಕೊಂಡಿದ್ದರು. ಈ ಸಿನಿಮಾದಲ್ಲಿ ‘ಲೀಡರ್ ರಾಮಯ್ಯ’ ಎಂದು ಹೆಸರಿಟ್ಟಿದ್ದರು. ರಾಮನವಮಿಯ ದಿನದಂದು ಸಿನಿಮಾದ ಪೋಸ್ಟರ್ ಅನ್ನು ಸಿದ್ದರಾಮಯ್ಯ ಅವರ ಬೆಂಗಳೂರಿನ ನಿವಾಸದಲ್ಲೇ ಬಿಡುಗಡೆ ಮಾಡಲಾಗಿತ್ತು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ತಯಾರಿಸುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು.
ಪೋಸ್ಟರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ, ಈವರೆಗೂ ಆ ಚಿತ್ರದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಅದು ಕೂಡ ಈವರೆಗೂ ಅಧಿಕೃತವಾಗಿಲ್ಲ. ಚುನಾವಣೆ, ನೀತಿಸಂಹಿತೆ ಕಾರಣದಿಂದಾಗಿ ಸಿನಿಮಾ ಶುರು ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಈ ಸಿನಿಮಾದ ಜೊತೆಗೆ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.
ಸಿದ್ದರಾಮಯ್ಯ ಎಂಬ ನಾನು ಚಿತ್ರತಂಡ ಹೇಳಿಕೊಂಡಂತೆ ಸದ್ಯದಲ್ಲೇ ಚಿತ್ರೀಕರಣ ಕೂಡ ಆರಂಭ ಮಾಡಲಿದ್ದಾರಂತೆ. ಆದರೆ ಈ ಕುರಿತು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ಮಾಡಿದ್ದರೋ ಅಥವಾ ಅವರಿಗೆ ಗೊತ್ತಾಗದಂತೆ ಸಿನಿಮಾ ಮಾಡುತ್ತಿದ್ದರೋ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…