BREAKING NEWS

ಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ: ಸಿ.ಎಂ.ಇಬ್ರಾಹಿಂ

ಬೆಂಗಳೂರು : ʼʼಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿʼʼ ಎಂದು ಎಚ್ಚರಿಸಿದರು.

ʼʼಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆʼʼ ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

5 mins ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

19 mins ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

1 hour ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

1 hour ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

2 hours ago

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

3 hours ago