ಬೆಂಗಳೂರು : ʼʼಜೆಡಿಎಸ್ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು ಕೋರ್ಟ್ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿʼʼ ಎಂದು ಎಚ್ಚರಿಸಿದರು.
ʼʼಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆʼʼ ಎಂದು ಬೇಸರ ವ್ಯಕ್ತಪಡಿಸಿದರು.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…