ಬೆಂಗಳೂರು : ʼʼಜೆಡಿಎಸ್ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು ಕೋರ್ಟ್ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿʼʼ ಎಂದು ಎಚ್ಚರಿಸಿದರು.
ʼʼಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆʼʼ ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…