BREAKING NEWS

ಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ: ಸಿ.ಎಂ.ಇಬ್ರಾಹಿಂ

ಬೆಂಗಳೂರು : ʼʼಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿʼʼ ಎಂದು ಎಚ್ಚರಿಸಿದರು.

ʼʼಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆʼʼ ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

18 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago