BREAKING NEWS

ಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ: ಸಿ.ಎಂ.ಇಬ್ರಾಹಿಂ

ಬೆಂಗಳೂರು : ʼʼಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿʼʼ ಎಂದು ಎಚ್ಚರಿಸಿದರು.

ʼʼಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆʼʼ ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

2 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

4 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

7 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

10 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

10 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

11 hours ago