BREAKING NEWS

ನಾನೇ ಸ್ಟಾರ್‌ ಪ್ರಚಾರಕ : ವರ್ತೂರು ಪ್ರಕಾಶ್‍

ಕೋಲಾರ : ಮಾಜಿ ಸಚಿವ ವರ್ತೂರು ಪ್ರಕಾಶ್‍ ಅವರಿಗೆ ಕೋಲಾರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಬುಧವಾರ ಬೆಂಬಲಿಗರು ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸಂಭ್ರಮಿಸಿದರು.
ನಂತರ ಪ್ರಕಾಶ್‌, ಸಂಸದ ಎಸ್‌.ಮುನಿಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್‌ ಜೊತೆ ಕೆಇಬಿ ಆವರಣದಲ್ಲಿರುವ ಗಣಪತಿ ದೇವಾಲಯದಲ್ಲಿ ಹಾಗೂ ಕನಕಮಂದಿರದಲ್ಲಿ ಪೂಜೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ವರ್ತೂರು, ‘ಏ.17ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವೆ. ಏ.19ರಂದು ಸಚಿವರಾದ ಮುನಿರತ್ನ ಹಾಗೂ ಡಾ.ಕೆ.ಸುಧಾಕರ್‌ ಸಮ್ಮುಖದಲ್ಲಿ ಸುಮಾರು 50 ಸಾವಿರ ಜನರನ್ನು ಸೇರಿಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸುವೆ’ ಎಂದರು.

‘ಕೋಲಾರ ಕ್ಷೇತ್ರಕ್ಕೆ ನಾನೇ ಸ್ಟಾರ್‌ ಪ್ರಚಾರಕ. ಬೇರೆ ಕ್ಷೇತ್ರಕ್ಕೂ ಹೋಗಿ ಪ್ರಚಾರ ಮಾಡುತ್ತೇನೆ. ಮತ್ತೊಬ್ಬ ಆಕಾಂಕ್ಷಿ ಓಂಶಕ್ತಿ ಚಲಪತಿ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಹುಡುಕಾಟದಲ್ಲಿದೆ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಪೈಪೋಟಿಯಿದೆ. ಸಿದ್ದರಾಮಯ್ಯ ಅಭ್ಯರ್ಥಿಯಾದರೆ ನನಗೆ ಇನ್ನೂ 10 ಸಾವಿರ ಹೆಚ್ಚಿಗೆ ಮತ ಬರುತ್ತವೆ’ ಎಂದರು.

ಸಂಸದ ಮುನಿಸ್ವಾಮಿ,ಕೆಯುಡಿಎ ಅಧ್ಯಕ್ಷ ವಿಜಯ್‍ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಮಾಜಿ ಸದಸ್ಯರಾದ ರೂಪಶ್ರೀ, ಅರುಣ್‍ಪ್ರಸಾದ್, ಬಂಕ್ ಮಂಜುನಾಥ್, ಮಾಗೇರಿ ನಾರಾಯಣಸ್ವಾಮಿ ಇದ್ದರು.

lokesh

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

1 hour ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

1 hour ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

1 hour ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

1 hour ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

1 hour ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

1 hour ago