ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ.
ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು.
ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿದ್ದ ಎಐಸಿಸಿ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಸೋಮವಾರ ಬೆಳಗ್ಗೆ ತೆರಳಿದ್ದರು. ನಂತರ ಶಾಸಕರ ಅಭಿಪ್ರಾಯವನ್ನು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಿದ್ದರು.
ವರಿಷ್ಠರ ಸೂಚನೆಯಂತೆ ಸಿದ್ದರಾಮಯ್ಯ ಅವರು ಸೋಮವಾರ ದೆಹಲಿಗೆ ಭೇಟಿ ನೀಡಿದ್ದು, ಅಲ್ಲಿಯೇ ರಾತ್ರಿ ತಂಗಿದ್ದರು. ಇತ್ತ ಡಿಕೆ ಶಿವಕುಮಾರ್ ಅವರು ಅನಾರೋಗ್ಯದ ಕಾರಣ ದೆಹಲಿಗೆ ತೆರಳಿಲ್ಲ.
ದೆಹಲಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ಕರ್ನಾಟಕದಲ್ಲಿ ಯಾವ ಯಾವ ಬದಲಾವಣೆ ಆಗುತ್ತಿದೆ ಎಂಬುದು ಎಲ್ಲರಿಗೆ ತಿಳಿದಿದೆ. ಹೈಕಮಾಂಡ್ ಭೇಟಿಯ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆಂದು ಹೇಳಿದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…