BREAKING NEWS

ಹೈಕಮಾಂಡ್ ನಿರ್ಧಾರವೇನೆಂದು ನನಗೆ ಗೊತ್ತಿಲ್ಲ; ಸಿದ್ದರಾಮಯ್ಯ

ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ.

ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು.

ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿದ್ದ ಎಐಸಿಸಿ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಸೋಮವಾರ ಬೆಳಗ್ಗೆ ತೆರಳಿದ್ದರು. ನಂತರ ಶಾಸಕರ ಅಭಿಪ್ರಾಯವನ್ನು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಿದ್ದರು.

ವರಿಷ್ಠರ ಸೂಚನೆಯಂತೆ ಸಿದ್ದರಾಮಯ್ಯ ಅವರು ಸೋಮವಾರ ದೆಹಲಿಗೆ ಭೇಟಿ ನೀಡಿದ್ದು, ಅಲ್ಲಿಯೇ ರಾತ್ರಿ ತಂಗಿದ್ದರು. ಇತ್ತ ಡಿಕೆ ಶಿವಕುಮಾರ್ ಅವರು ಅನಾರೋಗ್ಯದ ಕಾರಣ ದೆಹಲಿಗೆ ತೆರಳಿಲ್ಲ.

ದೆಹಲಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಹೈಕಮಾಂಡ್​ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ಕರ್ನಾಟಕದಲ್ಲಿ ಯಾವ ಯಾವ ಬದಲಾವಣೆ ಆಗುತ್ತಿದೆ ಎಂಬುದು ಎಲ್ಲರಿಗೆ ತಿಳಿದಿದೆ. ಹೈಕಮಾಂಡ್​ ಭೇಟಿಯ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆಂದು ಹೇಳಿದರು.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

48 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

55 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago