BREAKING NEWS

ನಿಮ್ಮಷ್ಟು ಪ್ರಬುದ್ಧತೆ ನನಗೆ ಬೇಕಿಲ್ಲ ಸರ್‌! 59 ಸಾವಿರ ಕೋಟಿ ರೂ. ಎಲ್ಲಿಂದ ತರ್ತಿರಿ ಹೇಳಿ: ಪ್ರತಾಪ್‌ ಸಿಂಹ

ಮೈಸೂರು : ಸಿದ್ದರಾಮಯ್ಯ ಅವರು ನನ್ನನ್ನು ಎಳಸು ಎಂದರು ಬೇಜಾರಿಲ್ಲ. ನಾನು ಕೇಳಿದ ಪ್ರಶ್ನೆಗಳಿಗೇಕೆ ಉತ್ತರ ನೀಡುತ್ತಿಲ್ಲ. ನೀವು ಬುದ್ದಿವಂತರಿದ್ದೀರಿ, ರಾಜ್ಯದ ಹಣಕಾಸು ವ್ಯವಸ್ಥೆ ತಿಳಿದಿರುವ ನೀವು ಹೇಗೆ ಗ್ಯಾರಂಟಿ ಘೋಷಣೆ ಮಾಡಿದ್ರಿ? 59 ಸಾವಿರ ಕೋಟಿ ರೂ. ಅನ್ನು ಎಲ್ಲಿಂದ ತರುತ್ತೀರಿ ಹೇಳಿ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಪ್ರಶ್ನಿಸಿದ್ದಾರೆ.

ಪ್ರತಾಪ್‌ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ ಎಂದ ಸಿದ್ದರಾಮಯ್ಯ ಅವರ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನನ್ನನ್ನು ಚೈಲ್ಡ್ ಅಂತಾನೆ ಕರೆಯಿರಿ ಬೇಜಾರು ಇಲ್ಲ. ಆದರೆ, ರಾಜ್ಯದಲ್ಲಿ ಸಂಪನ್ಮೂಲ ಕ್ರೋಡಿಕರಣ ಮಾಡುವುದು ಹೇಗೆ ತಿಳಿಸಿ. ಹಿರಿಯ ರಾಜಕಾರಣಿ ಆಗಿರುವ ನೀವು ಜಿ ಪರಮೇಶ್ವರ್ ಅವರನ್ನು ಮುಗಿಸಿ ಸಿಎಂ ಆಗಿದ್ರಲ್ಲ ಆ ರೀತಿಯ ಪ್ರಬುದ್ಧತೆ ನನಗೆ ಬೇಕಿಲ್ಲ ಸರ್ ಎಂದು ಟಾಂಗ್‌ ನೀಡಿದ್ದಾರೆ.

ಇನ್ನು, ರಾಜಕೀಯದಲ್ಲಿ ನಿಮ್ಮನ್ನು ಮುಂದೆ ಬರಲು ಸಹಕರಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಬಗ್ಗೆ ಅಗೌರವವಾಗಿ ಮಾತನಾಡುವುದು ನಿಮ್ಮ ಪ್ರಬುದ್ಧತೆ ಎನ್ನುವುದಾದರೆ ಅದು ನನಗೆ ಬೇಡ ಸರ್‌. ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮುಖ ‌ಪಾತ್ರ ವಹಿಸಿದ್ದರು. ಆದರೆ, ಅವರ ವಿರುದ್ಧವೇ ಎಂಬಿ ಪಾಟೀಲರನ್ನು ಚೂ ಬಿಟ್ಟಿದ್ದೀರಿ. ಇದನ್ನೆಲ್ಲಾ ಮೆಚುರಿಟಿ ಎನ್ನುವುದಾದರೆ ಇದ್ಯಾವೂದು ನನಗೆ ಬೇಡ ಸರ ಎಂದು ಕಿಡಿಕಾರಿದ್ದಾರೆ.

ಇನ್ನು, ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸರಣಿ ಹತ್ಯೆ, ಹಲ್ಲೆಗಳಾಗಿವೆ. ಕಲಬುರಗಿಯಲ್ಲಿ ಪಿಎಸ್‌ಐ ಮಲ್ಲಿಕಾರ್ಜುನ ಬಂಡೆ ಹತ್ಯೆ ಆಯ್ತು. ಡಿಸಿಪಿಯಾಗಿದ್ದ ಗಣಪತಿ ಭಟ್‌ ಆತ್ಮಹತ್ಯೆ ಮಾಡಿಕೊಂಡರು. ಮೈಸೂರಿನಲ್ಲಿ ಅಧಿಕಾರಿ ರಶ್ಮಿ ಮಹೇಶ್ ಮೇಲೆ ದಾಳಿಯಾಯ್ತು. ಶಿಖಾ ಹಲ್ಲೆ ಸೇರಿ ಹಲವೆಡೆ ಗಲಾಟೆಗಳಾಗಿದ್ದವು. ಹೀಗಾಗಿ ಈ ಬಾರಿಯೂ ನಾವು ಕಾನೂನು ವ್ಯವಸ್ಥೆಯನ್ನು ಕಾಣಲು ಸಾಧ್ಯವಿಲ್ಲ. ಕರ್ನಾಟಕದ ಜನ ಮುಂದೆ ಇನ್ನಷ್ಟು ನೋಡುವುದು ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕಿತ್ತು!

10 ಕೆಜಿ ಅಕ್ಕಿ ಕೊಡ್ತೀವಿ ಎಂದು ಘೋಷಣೆ ಮಾಡುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಏನಾದರೂ ಕೇಳಿದ್ರಾ ಎಂದು ಪ್ರತಾಪ್‌ ಸಿಂಹ ಪ್ರಶ್ನಿಸಿದರು. ಅದಲ್ಲದೇ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪ್ರತಾಪ್‌ ಸಿಂಹ, ಡಿಕೆ ಶಿವಕುಮಾರ್‌ ಅವರನ್ನು ಈ ವೇಳೆ ಹೊಗಳಿದ್ದು ವಿಶೇಷವಾಗಿತ್ತು. ಚುನಾವಣಾ ತಂತ್ರಗಾರಿಕೆ ಏಜೆನ್ಸಿ ಮೂಲಕ ಗ್ಯಾರಂಟಿ ಯೋಜನೆ ರೂಪಿಸಿದವರು ಡಿಕೆ ಶಿವಕುಮಾರ್‌. ಅವರು ಓರ್ವ ಫೈಟರ್‌. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆ ಶಿವಕುಮಾರ್‌ ಅವರ ಹೋರಾಟ ಪ್ರಮುಖ ಕಾರಣವಾಗಿದೆ. ಅವರು ನಮ್ಮ ಎದುರಾಳಿ ಇರಬಹುದು. ಆದರೆ, ಅವರು ಮುಖ್ಯಮಂತ್ರಿ ಆಗಬೇಕಿತ್ತು ಎಂದಿದ್ದಾರೆ.

ಮನೆ ಮನೆಗೂ ಕೇಂದ್ರದ ಸಾಧನೆ ತಲುಪಿಸುತ್ತೇವೆ!

ಇನ್ನು, ಪ್ರಧಾನಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಇಡಿದು 9 ವರ್ಷ ಆಯ್ತು, ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಪ್ರಚಾರ ಅಭಿಯಾನ ಆರಂಭಿಸುತ್ತೇವೆ. ಒಂದು ತಿಂಗಳ ಕಾಲ ರಾಜ್ಯದಲ್ಲಿ ಮನೆ ಮನೆಗೂ ತಲುಪುತ್ತೇವೆ. ಜೂನ್‌ 22ರಂದು ಕಾರ್ಯಕರ್ತರೊಂದಿಗೆ ದೊಡ್ಡ ಸಭೆ ಮಾಡ್ತಿದ್ದೇವೆ. ಈ ಸಭೆಯ ನೇತೃತ್ವವನ್ನ ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಲಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ಮೈಸೂರಿಗೆ ‌ನೀಡಿರುವ ಕೊಡುಗೆ ಅಪಾರ, ಮೋದಿ ಅವಧಿಯಲ್ಲಿ ವಾಯು, ರಸ್ತೆ, ರೈಲು ಸಂಪರ್ಕ ಜಾಸ್ತಿಯಾಗಿದೆ. ಮೈಸೂರು-ಬೆಂಗಳೂರು ಹೈವೇಗೆ 10 ಸಾವಿರ ಕೋಟಿ ರೂ. ನೀಡಿದ್ದಾರೆ ಮೈಸೂರಿಗೆ ಔಟರ್ ರಿಂಗ್ ರೋಡ್ ಮಾಡಲಾಗುತ್ತೆ. ರೈಲ್ವೇ ಇಲಾಖೆಯಲ್ಲೂ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ರೈಲ್ವೇ ನಿಲ್ದಾಣದಲ್ಲಿ ಹೊಸ ಪ್ಲಾಟ್ ಫಾರಂ ಕಾರ್ಯ ನಡೆಯುತ್ತಿದೆ. ಮೈಸೂರಿಗೆ ಗ್ರಾಮ ಸಡಕ್ ಯೋಜನೆಯಡಿ 152 ಕೋಟಿ ರೂ. ಹಣ ನೀಡಿದ್ದಾರೆ. ಕುಡಿಯುವ ನೀರಿಗೂ ಹಲವು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

7 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

10 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

13 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

13 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

13 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

13 hours ago