BREAKING NEWS

ಸಿಎಂ ಸ್ಥಾನ ಅಧಿಕಾರ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ : ಎಂಬಿ ಪಾಟೀಲ್

ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,‌ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು, ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು ಅದಕ್ಕೆ, ‌ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ಹೇಳಿದ್ದರು. ಕೆ.ಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನು ಹೇಳಿದೆ ಎಂದರು.
ಸಿಎಂ ಸ್ಥಾನದಲ್ಲಿ ಪವರ್ ಶೇರಿಂಗ್ ಇಲ್ಲ. ಇದ್ರೆ ಅದು ಜನರ ಜೊತೆ ಮಾತ್ರ ಅಂತ‌ ಹೇಳಿದ್ರು. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಎಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನು ಅಷ್ಟೇ ನಾನು ಹೇಳಿದ್ದು. ಪವರ್ ಶೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೆ ಹೇಳಿದ್ದೇನೆ

ಇನ್ನು ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದರು. ಡಿಕೆ ಸುರೇಶ್ ನಿವಾಸದ ಬಳಿ ಸಲೀಂ ಅಹಮದ್ ಮಾತನಾಡಿ, ಎಂಬಿ ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದುಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಆಗಿರುವ ಮಾತುಕತೆ.‌ ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ ಎಂದರು. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು.‌ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.

ಇನ್ನು ಡಿಕೆ ಸುರೇಶ್ ಎಂಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ನಾನೂ ತೀಕ್ಷ್ಣವಾಗಿ ಎಚ್ಚರಿಕೆ ಕೊಡಬಲ್ಲೆ. ಆದರೆ ಈಗ ಅದು ಬೇಡ ಎಂದರು. ಇನ್ನು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಎಂಬಿ ಪಾಟೀಲ್ ಪರ ಹಾಗೂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದು, 2013 ರಲ್ಲಿ ಇಲ್ಲದ ಚರ್ಚೆ ಈಗ ಯಾಕೆ ಎಂದರು.

lokesh

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

3 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

3 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

3 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

3 hours ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

14 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

14 hours ago