BREAKING NEWS

ಸಿಎಂ ಸ್ಥಾನ ಅಧಿಕಾರ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ : ಎಂಬಿ ಪಾಟೀಲ್

ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,‌ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು, ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು ಅದಕ್ಕೆ, ‌ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ಹೇಳಿದ್ದರು. ಕೆ.ಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನು ಹೇಳಿದೆ ಎಂದರು.
ಸಿಎಂ ಸ್ಥಾನದಲ್ಲಿ ಪವರ್ ಶೇರಿಂಗ್ ಇಲ್ಲ. ಇದ್ರೆ ಅದು ಜನರ ಜೊತೆ ಮಾತ್ರ ಅಂತ‌ ಹೇಳಿದ್ರು. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಎಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನು ಅಷ್ಟೇ ನಾನು ಹೇಳಿದ್ದು. ಪವರ್ ಶೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೆ ಹೇಳಿದ್ದೇನೆ

ಇನ್ನು ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದರು. ಡಿಕೆ ಸುರೇಶ್ ನಿವಾಸದ ಬಳಿ ಸಲೀಂ ಅಹಮದ್ ಮಾತನಾಡಿ, ಎಂಬಿ ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದುಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಆಗಿರುವ ಮಾತುಕತೆ.‌ ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ ಎಂದರು. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು.‌ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.

ಇನ್ನು ಡಿಕೆ ಸುರೇಶ್ ಎಂಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ನಾನೂ ತೀಕ್ಷ್ಣವಾಗಿ ಎಚ್ಚರಿಕೆ ಕೊಡಬಲ್ಲೆ. ಆದರೆ ಈಗ ಅದು ಬೇಡ ಎಂದರು. ಇನ್ನು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಎಂಬಿ ಪಾಟೀಲ್ ಪರ ಹಾಗೂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದು, 2013 ರಲ್ಲಿ ಇಲ್ಲದ ಚರ್ಚೆ ಈಗ ಯಾಕೆ ಎಂದರು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago