BREAKING NEWS

ಸಿಎಂ ಸ್ಥಾನ ಅಧಿಕಾರ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ : ಎಂಬಿ ಪಾಟೀಲ್

ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,‌ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು, ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು ಅದಕ್ಕೆ, ‌ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ಹೇಳಿದ್ದರು. ಕೆ.ಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನು ಹೇಳಿದೆ ಎಂದರು.
ಸಿಎಂ ಸ್ಥಾನದಲ್ಲಿ ಪವರ್ ಶೇರಿಂಗ್ ಇಲ್ಲ. ಇದ್ರೆ ಅದು ಜನರ ಜೊತೆ ಮಾತ್ರ ಅಂತ‌ ಹೇಳಿದ್ರು. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಎಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನು ಅಷ್ಟೇ ನಾನು ಹೇಳಿದ್ದು. ಪವರ್ ಶೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೆ ಹೇಳಿದ್ದೇನೆ

ಇನ್ನು ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದರು. ಡಿಕೆ ಸುರೇಶ್ ನಿವಾಸದ ಬಳಿ ಸಲೀಂ ಅಹಮದ್ ಮಾತನಾಡಿ, ಎಂಬಿ ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದುಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಆಗಿರುವ ಮಾತುಕತೆ.‌ ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ ಎಂದರು. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು.‌ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.

ಇನ್ನು ಡಿಕೆ ಸುರೇಶ್ ಎಂಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ನಾನೂ ತೀಕ್ಷ್ಣವಾಗಿ ಎಚ್ಚರಿಕೆ ಕೊಡಬಲ್ಲೆ. ಆದರೆ ಈಗ ಅದು ಬೇಡ ಎಂದರು. ಇನ್ನು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಎಂಬಿ ಪಾಟೀಲ್ ಪರ ಹಾಗೂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದು, 2013 ರಲ್ಲಿ ಇಲ್ಲದ ಚರ್ಚೆ ಈಗ ಯಾಕೆ ಎಂದರು.

lokesh

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

2 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

3 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

3 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

3 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

3 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

3 hours ago