BREAKING NEWS

ನಾನು ಈ ಪಕ್ಷ ಕಟ್ಟಿದ್ದೇನೆ: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಹೊಸದಿಲ್ಲಿ: ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿ ತಲುಪಿದ್ದಾರೆ. ಇಂದು ದೆಹಲಿಗೆ ತೆರಳಿ, ಅಲ್ಲಿ ಡಿ.ಕೆ.ಸುರೇಶ್ ನಿವಾಸದಲ್ಲಿ ಸಭೆ ನಡೆಸಿ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯಾವುದಾದರೂ ಚಾನೆಲ್ ನಾನು ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವರದಿ ಮಾಡುತ್ತಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ’ ಎಂದು ಗುಡುಗಿದರು.

“ಕೆಲವರು ನಾನು ರಾಜೀನಾಮೆ ನೀಡುತ್ತೇನೆ ಎಂದು ವರದಿ ಮಾಡುತ್ತಿದ್ದಾರೆ. ನನ್ನ ತಾಯಿ ನನ್ನ ಪಕ್ಷ, ನಾನು ಈ ಪಕ್ಷವನ್ನು ಕಟ್ಟಿದ್ದೇನೆ. ಇದು ನನ್ನ ಹೈಕಮಾಂಡ್, ನನ್ನ ಶಾಸಕ, ನನ್ನ ಪಕ್ಷವಿದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಿಎಂ ಆಯ್ಕೆ ಕಗ್ಗಂಟು ಮುಂದುವರಿದಿದ್ದು, ಇಂದು ಮಧ್ಯಾಹ್ನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರ ಸಭೆ ನಡೆದಿದೆ.

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್, ಬಿಜೆಪಿ ಪಾಳೆಯದಲ್ಲಿ ಮಿಶ್ರಭಾವನೆ ಹುಟ್ಟು ಹಾಕಿದ ಉಪಚುನಾವಣೆ

ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…

5 mins ago

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

3 hours ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

3 hours ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

3 hours ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

3 hours ago