BREAKING NEWS

ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ, ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ : ಸಿದ್ದರಾಮಯ್ಯ

ಮೈಸೂರು : ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ ಮಾತ್ರ ನಾನು ಹೇಳಿಕೆ ನೀಡಿದ್ದೇನೆ.

ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌, ಜೆ.ಹೆಚ್‌.ಪಟೇಲ್‌, ಎಸ್‌.ಆರ್.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್‌ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್‌ ನೀಡುತ್ತಿದ್ದೆವು ಎಂದು ಪ್ರಶ್ನಿಸಿದರು.

ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ : ಲಿಂಗಾಯತ ಅಸ್ತ್ರ ಎಂಬ ಪ್ರಶ್ನೆಗೆ ಮಾತ್ರ ನಾನು ಉತ್ತರ ನೀಡಿದ್ದೇನೆ. ಈಗಾಗಲೇ ಲಿಂಗಾಯತರೇ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಸೋಮಣ್ಣ, ಆರ್‌ ಎಸ್‌ ಎಸ್ ಏನೇ ಮಾಡಿದ್ರು ಜನ ಕೈ ಹಿಡಿಯುತ್ತಾರೆ. ಸಂತೋಷ್​ಗೂ, ಸೋಮಣ್ಣಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಜೆಡಿಎಸ್ ಮತ್ತೆ ಬಿಜೆಪಿಗೆ ಮತ ಹಾಕದಂತೆ ಸಿದ್ಧರಾಮಯ್ಯ ಕರೆ : ನನ್ನ ಸೋಲಿಸಲು, ದಲಿತ ಮತ ವಿಭಜನೆ ಮಾಡಲು ಜೆಡಿಎಸ್ ಹಾಗೂ ಬಿಎಸ್ ಪಿ‌ ಯಿಂದ ದಲಿತ ಅಭ್ಯರ್ಥಿ ಗಳನ್ನು ಹಾಕಿದ್ದಾರೆ. ಜೆಡಿಎಸ್, ಆರ್‌ ಎಸ್‌ ಎಸ್ ಗೆ ಮತ ಹಾಕಿದ್ರೆ ಬಿಜೆಪಿಗೆ ಹೋಗುತ್ತದೆ. ಹೀಗಾಗಿ ಬಿಎಸ್ ಪಿ‌ , ಜೆಡಿಎಸ್​ಗೆ ಮತ ಹಾಕಬೇಡಿ. ನನಗೆ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಹಾಕಿ. ಬಿಎಸ್ ಪಿ ಇಲ್ಲಿ ಗೆಲ್ಲೋದಿಲ್ಲ, ಆದರೆ ಅವರು ನನಗೆ ತೊಂದರೆ ಕೊಡೋಕೆ ನಿಂತಿರೋದು. ಜೆಡಿಎಸ್ ಮತ್ತೆ ಬಿಜೆಪಿ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಬೇಕು ಎಂದು ಪ್ರಚಾರದಲ್ಲಿ ಹೇಳಿದರು.

ಆರ್‌ ಎಸ್‌ ಎಸ್ ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ : ವರುಣ ಕ್ಷೇತ್ರದಲ್ಲೇ ನನ್ನನ್ನು ಕಟ್ಟಿಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರುಣ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿದರು.
ಆರ್‌ ಎಸ್‌ ಎಸ್, ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ. ಆದರೆ ವರುಣ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಕೈಹಿಡಿಯುತ್ತಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದೆ, ಲಿಂಗಾಯತರೇ ಸಿಎಂ ಆಗಿರುವುದು. ಇವಾಗ ಅವರೇ ಅಲ್ವ ಭ್ರಷ್ಟಾಚಾರ ಮಾಡಿ ಕೆಟ್ಟ ಹೆಸರು ತಂದಿರುವುದು ಎಂದು ಕಿಡಿಕಾರಿದರು. ಈ ಚುನಾವಣೆ ಮಹತ್ತರವಾದ ಚುನಾವಣೆ. ನಿಮ್ಮೆಲ್ಲರ ಪ್ರೀತಿ, ಅಭಿಮಾನದ ಮುಂದೆ ಯಾರು ಎಷ್ಟೇ ದ್ವೇಷದ ರಾಜಕಾರಣ ಮಾಡಿದರು ಅದು ನಗಣ್ಯ. ಎರಡು ಬಾರಿ ವರುಣದಿಂದ ಗೆಲ್ಲಿಸಿದ್ದೀರಿ ಎಂದು ಹೇಳಿದರು.

lokesh

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

9 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

9 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

10 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

10 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

10 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

10 hours ago