BREAKING NEWS

ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ, ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ : ಸಿದ್ದರಾಮಯ್ಯ

ಮೈಸೂರು : ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ ಮಾತ್ರ ನಾನು ಹೇಳಿಕೆ ನೀಡಿದ್ದೇನೆ.

ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌, ಜೆ.ಹೆಚ್‌.ಪಟೇಲ್‌, ಎಸ್‌.ಆರ್.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್‌ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್‌ ನೀಡುತ್ತಿದ್ದೆವು ಎಂದು ಪ್ರಶ್ನಿಸಿದರು.

ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ : ಲಿಂಗಾಯತ ಅಸ್ತ್ರ ಎಂಬ ಪ್ರಶ್ನೆಗೆ ಮಾತ್ರ ನಾನು ಉತ್ತರ ನೀಡಿದ್ದೇನೆ. ಈಗಾಗಲೇ ಲಿಂಗಾಯತರೇ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಸೋಮಣ್ಣ, ಆರ್‌ ಎಸ್‌ ಎಸ್ ಏನೇ ಮಾಡಿದ್ರು ಜನ ಕೈ ಹಿಡಿಯುತ್ತಾರೆ. ಸಂತೋಷ್​ಗೂ, ಸೋಮಣ್ಣಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಜೆಡಿಎಸ್ ಮತ್ತೆ ಬಿಜೆಪಿಗೆ ಮತ ಹಾಕದಂತೆ ಸಿದ್ಧರಾಮಯ್ಯ ಕರೆ : ನನ್ನ ಸೋಲಿಸಲು, ದಲಿತ ಮತ ವಿಭಜನೆ ಮಾಡಲು ಜೆಡಿಎಸ್ ಹಾಗೂ ಬಿಎಸ್ ಪಿ‌ ಯಿಂದ ದಲಿತ ಅಭ್ಯರ್ಥಿ ಗಳನ್ನು ಹಾಕಿದ್ದಾರೆ. ಜೆಡಿಎಸ್, ಆರ್‌ ಎಸ್‌ ಎಸ್ ಗೆ ಮತ ಹಾಕಿದ್ರೆ ಬಿಜೆಪಿಗೆ ಹೋಗುತ್ತದೆ. ಹೀಗಾಗಿ ಬಿಎಸ್ ಪಿ‌ , ಜೆಡಿಎಸ್​ಗೆ ಮತ ಹಾಕಬೇಡಿ. ನನಗೆ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಹಾಕಿ. ಬಿಎಸ್ ಪಿ ಇಲ್ಲಿ ಗೆಲ್ಲೋದಿಲ್ಲ, ಆದರೆ ಅವರು ನನಗೆ ತೊಂದರೆ ಕೊಡೋಕೆ ನಿಂತಿರೋದು. ಜೆಡಿಎಸ್ ಮತ್ತೆ ಬಿಜೆಪಿ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಬೇಕು ಎಂದು ಪ್ರಚಾರದಲ್ಲಿ ಹೇಳಿದರು.

ಆರ್‌ ಎಸ್‌ ಎಸ್ ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ : ವರುಣ ಕ್ಷೇತ್ರದಲ್ಲೇ ನನ್ನನ್ನು ಕಟ್ಟಿಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರುಣ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿದರು.
ಆರ್‌ ಎಸ್‌ ಎಸ್, ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ. ಆದರೆ ವರುಣ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಕೈಹಿಡಿಯುತ್ತಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದೆ, ಲಿಂಗಾಯತರೇ ಸಿಎಂ ಆಗಿರುವುದು. ಇವಾಗ ಅವರೇ ಅಲ್ವ ಭ್ರಷ್ಟಾಚಾರ ಮಾಡಿ ಕೆಟ್ಟ ಹೆಸರು ತಂದಿರುವುದು ಎಂದು ಕಿಡಿಕಾರಿದರು. ಈ ಚುನಾವಣೆ ಮಹತ್ತರವಾದ ಚುನಾವಣೆ. ನಿಮ್ಮೆಲ್ಲರ ಪ್ರೀತಿ, ಅಭಿಮಾನದ ಮುಂದೆ ಯಾರು ಎಷ್ಟೇ ದ್ವೇಷದ ರಾಜಕಾರಣ ಮಾಡಿದರು ಅದು ನಗಣ್ಯ. ಎರಡು ಬಾರಿ ವರುಣದಿಂದ ಗೆಲ್ಲಿಸಿದ್ದೀರಿ ಎಂದು ಹೇಳಿದರು.

lokesh

Recent Posts

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

2 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

2 hours ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

2 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

3 hours ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

3 hours ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

4 hours ago