BREAKING NEWS

ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ, ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ : ಸಿದ್ದರಾಮಯ್ಯ

ಮೈಸೂರು : ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ ಮಾತ್ರ ನಾನು ಹೇಳಿಕೆ ನೀಡಿದ್ದೇನೆ.

ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌, ಜೆ.ಹೆಚ್‌.ಪಟೇಲ್‌, ಎಸ್‌.ಆರ್.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್‌ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್‌ ನೀಡುತ್ತಿದ್ದೆವು ಎಂದು ಪ್ರಶ್ನಿಸಿದರು.

ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ : ಲಿಂಗಾಯತ ಅಸ್ತ್ರ ಎಂಬ ಪ್ರಶ್ನೆಗೆ ಮಾತ್ರ ನಾನು ಉತ್ತರ ನೀಡಿದ್ದೇನೆ. ಈಗಾಗಲೇ ಲಿಂಗಾಯತರೇ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಸೋಮಣ್ಣ, ಆರ್‌ ಎಸ್‌ ಎಸ್ ಏನೇ ಮಾಡಿದ್ರು ಜನ ಕೈ ಹಿಡಿಯುತ್ತಾರೆ. ಸಂತೋಷ್​ಗೂ, ಸೋಮಣ್ಣಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಜೆಡಿಎಸ್ ಮತ್ತೆ ಬಿಜೆಪಿಗೆ ಮತ ಹಾಕದಂತೆ ಸಿದ್ಧರಾಮಯ್ಯ ಕರೆ : ನನ್ನ ಸೋಲಿಸಲು, ದಲಿತ ಮತ ವಿಭಜನೆ ಮಾಡಲು ಜೆಡಿಎಸ್ ಹಾಗೂ ಬಿಎಸ್ ಪಿ‌ ಯಿಂದ ದಲಿತ ಅಭ್ಯರ್ಥಿ ಗಳನ್ನು ಹಾಕಿದ್ದಾರೆ. ಜೆಡಿಎಸ್, ಆರ್‌ ಎಸ್‌ ಎಸ್ ಗೆ ಮತ ಹಾಕಿದ್ರೆ ಬಿಜೆಪಿಗೆ ಹೋಗುತ್ತದೆ. ಹೀಗಾಗಿ ಬಿಎಸ್ ಪಿ‌ , ಜೆಡಿಎಸ್​ಗೆ ಮತ ಹಾಕಬೇಡಿ. ನನಗೆ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಹಾಕಿ. ಬಿಎಸ್ ಪಿ ಇಲ್ಲಿ ಗೆಲ್ಲೋದಿಲ್ಲ, ಆದರೆ ಅವರು ನನಗೆ ತೊಂದರೆ ಕೊಡೋಕೆ ನಿಂತಿರೋದು. ಜೆಡಿಎಸ್ ಮತ್ತೆ ಬಿಜೆಪಿ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಬೇಕು ಎಂದು ಪ್ರಚಾರದಲ್ಲಿ ಹೇಳಿದರು.

ಆರ್‌ ಎಸ್‌ ಎಸ್ ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ : ವರುಣ ಕ್ಷೇತ್ರದಲ್ಲೇ ನನ್ನನ್ನು ಕಟ್ಟಿಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರುಣ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿದರು.
ಆರ್‌ ಎಸ್‌ ಎಸ್, ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ. ಆದರೆ ವರುಣ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಕೈಹಿಡಿಯುತ್ತಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದೆ, ಲಿಂಗಾಯತರೇ ಸಿಎಂ ಆಗಿರುವುದು. ಇವಾಗ ಅವರೇ ಅಲ್ವ ಭ್ರಷ್ಟಾಚಾರ ಮಾಡಿ ಕೆಟ್ಟ ಹೆಸರು ತಂದಿರುವುದು ಎಂದು ಕಿಡಿಕಾರಿದರು. ಈ ಚುನಾವಣೆ ಮಹತ್ತರವಾದ ಚುನಾವಣೆ. ನಿಮ್ಮೆಲ್ಲರ ಪ್ರೀತಿ, ಅಭಿಮಾನದ ಮುಂದೆ ಯಾರು ಎಷ್ಟೇ ದ್ವೇಷದ ರಾಜಕಾರಣ ಮಾಡಿದರು ಅದು ನಗಣ್ಯ. ಎರಡು ಬಾರಿ ವರುಣದಿಂದ ಗೆಲ್ಲಿಸಿದ್ದೀರಿ ಎಂದು ಹೇಳಿದರು.

lokesh

Recent Posts

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

22 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

50 mins ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

3 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

3 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

3 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

4 hours ago