BREAKING NEWS

ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ, ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ : ಸಿದ್ದರಾಮಯ್ಯ

ಮೈಸೂರು : ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ ಮಾತ್ರ ನಾನು ಹೇಳಿಕೆ ನೀಡಿದ್ದೇನೆ.

ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌, ಜೆ.ಹೆಚ್‌.ಪಟೇಲ್‌, ಎಸ್‌.ಆರ್.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್‌ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್‌ ನೀಡುತ್ತಿದ್ದೆವು ಎಂದು ಪ್ರಶ್ನಿಸಿದರು.

ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ : ಲಿಂಗಾಯತ ಅಸ್ತ್ರ ಎಂಬ ಪ್ರಶ್ನೆಗೆ ಮಾತ್ರ ನಾನು ಉತ್ತರ ನೀಡಿದ್ದೇನೆ. ಈಗಾಗಲೇ ಲಿಂಗಾಯತರೇ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಸೋಮಣ್ಣ, ಆರ್‌ ಎಸ್‌ ಎಸ್ ಏನೇ ಮಾಡಿದ್ರು ಜನ ಕೈ ಹಿಡಿಯುತ್ತಾರೆ. ಸಂತೋಷ್​ಗೂ, ಸೋಮಣ್ಣಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಜೆಡಿಎಸ್ ಮತ್ತೆ ಬಿಜೆಪಿಗೆ ಮತ ಹಾಕದಂತೆ ಸಿದ್ಧರಾಮಯ್ಯ ಕರೆ : ನನ್ನ ಸೋಲಿಸಲು, ದಲಿತ ಮತ ವಿಭಜನೆ ಮಾಡಲು ಜೆಡಿಎಸ್ ಹಾಗೂ ಬಿಎಸ್ ಪಿ‌ ಯಿಂದ ದಲಿತ ಅಭ್ಯರ್ಥಿ ಗಳನ್ನು ಹಾಕಿದ್ದಾರೆ. ಜೆಡಿಎಸ್, ಆರ್‌ ಎಸ್‌ ಎಸ್ ಗೆ ಮತ ಹಾಕಿದ್ರೆ ಬಿಜೆಪಿಗೆ ಹೋಗುತ್ತದೆ. ಹೀಗಾಗಿ ಬಿಎಸ್ ಪಿ‌ , ಜೆಡಿಎಸ್​ಗೆ ಮತ ಹಾಕಬೇಡಿ. ನನಗೆ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಹಾಕಿ. ಬಿಎಸ್ ಪಿ ಇಲ್ಲಿ ಗೆಲ್ಲೋದಿಲ್ಲ, ಆದರೆ ಅವರು ನನಗೆ ತೊಂದರೆ ಕೊಡೋಕೆ ನಿಂತಿರೋದು. ಜೆಡಿಎಸ್ ಮತ್ತೆ ಬಿಜೆಪಿ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಬೇಕು ಎಂದು ಪ್ರಚಾರದಲ್ಲಿ ಹೇಳಿದರು.

ಆರ್‌ ಎಸ್‌ ಎಸ್ ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ : ವರುಣ ಕ್ಷೇತ್ರದಲ್ಲೇ ನನ್ನನ್ನು ಕಟ್ಟಿಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರುಣ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿದರು.
ಆರ್‌ ಎಸ್‌ ಎಸ್, ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ. ಆದರೆ ವರುಣ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಕೈಹಿಡಿಯುತ್ತಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದೆ, ಲಿಂಗಾಯತರೇ ಸಿಎಂ ಆಗಿರುವುದು. ಇವಾಗ ಅವರೇ ಅಲ್ವ ಭ್ರಷ್ಟಾಚಾರ ಮಾಡಿ ಕೆಟ್ಟ ಹೆಸರು ತಂದಿರುವುದು ಎಂದು ಕಿಡಿಕಾರಿದರು. ಈ ಚುನಾವಣೆ ಮಹತ್ತರವಾದ ಚುನಾವಣೆ. ನಿಮ್ಮೆಲ್ಲರ ಪ್ರೀತಿ, ಅಭಿಮಾನದ ಮುಂದೆ ಯಾರು ಎಷ್ಟೇ ದ್ವೇಷದ ರಾಜಕಾರಣ ಮಾಡಿದರು ಅದು ನಗಣ್ಯ. ಎರಡು ಬಾರಿ ವರುಣದಿಂದ ಗೆಲ್ಲಿಸಿದ್ದೀರಿ ಎಂದು ಹೇಳಿದರು.

lokesh

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

3 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

3 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

3 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

5 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

7 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

8 hours ago