BREAKING NEWS

ಚುನಾವಣಾ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ : ಕಟೀಲ್ ಸ್ಪಷ್ಟನೆ

ಬಳ್ಳಾರಿ : 2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಅಕ್ಕಿ ನಿರಾಕರಣೆ ಕುರಿತು ಮಾತನಾಡಿದ ಕಟೀಲ್, ಕೇಂದ್ರದಲ್ಲಿ ಕಳೆದ ಒಂಭತ್ತು ವರ್ಷ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದೇವೆ. ಭಯೋತ್ಪಾದನಾ ಚಟುವಟಿಕೆ ಶೇ 80 ಕಡಿಮೆ ಆಗಿದೆ, ನಕ್ಸಲ್ ಹಾಗೂ ಆತಂಕವಾದ ನಿರ್ಮೂಲನೆ ಮಾಡಿದ್ದು, ಕೇಂದ್ರ ಸರ್ಕಾರದ ನಿರಂತರವಾಗಿ 5 ಕೆಜಿ ಅಕ್ಕಿ ಕೊಡುತ್ತದೆ. ದೇಶದ ಎಲ್ಲಾ ರಾಜ್ಯಗಳಿಗೆ ಅಕ್ಕಿ ಕೊಡುತ್ತದೆ. ಬರ ಮತ್ತು ನೆರೆ ಬಂದಾಗ ವಿತರಿಸಲು ಕೇಂದ್ರ ಅಕ್ಕಿ ಸಂಗ್ರಹ ಮಾಡುತ್ತದೆ ಎಂದು ಹೇಳಿದರು.

ಒಳ ಒಪ್ಪಂದ ಆಗಿಲ್ಲ : ಇನ್ನೂ ರಾಜ್ಯದಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಕಾಂಗ್ರೆಸ್ ನ ಗ್ಯಾರೆಂಟಿ ಕಾರ್ಡ್ ಗಳಿಂದ ಸರ್ಕಾರ ಬಂದಿದೆ. ಇನ್ನೂ ರಾಜ್ಯದಲ್ಲಿ ಒಳ ಒಪ್ಪಂದದ ಬಗ್ಗೆ ಬಿಜೆಪಿ ನಾಯಕರ ಹೇಳಿಕೆಯನ್ನು ಗಮನಿಸಿದ್ದೇನೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಒಳ ಒಪ್ಪಂದ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಬಿಜೆಪಿಯಿಂದ ಲಿಂಗಾಯಿತರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಕಡಗಣನೆ ಮಾಡಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತ ಮುಖ್ಯಮಂತ್ರಿ ಮಾಡಿದ್ದು, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನ ಬಿಜೆಪಿ ಸಿಎಂ ಮಾಡಿದೆ. ರಾಜ್ಯದಲ್ಲಿ ಲಿಂಗಾಯತರು ಮತ್ತೆ ಸಿಎಂ ಆಗಬೇಕಾದ್ರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ನನ್ನ ಅವಧಿ ಮುಕ್ತಾಯವಾಗಿದೆ, ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆ ನಡೆಯುತ್ತದೆ. ನೈತಿಕವಾಗಿ ನಾನು ಜವಾಬ್ದಾರಿ ಹೊತ್ತಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ಜವಾಬ್ದಾರಿ ಹೊತ್ತು ರಾಜೀನಾಮೆ ಪತ್ರ ನೀಡಿದ್ದೇನೆ. ಮೌಖಿಕವಾಗಿಯೂ ರಾಷ್ಟ್ರೀಯ ಅಧ್ಯಕ್ಷ ರಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ ಬೇಡಿಕೆ ಇಟ್ಟ ವಿಚಾರವಾಗಿ ಮಾತನಾಡಿ, ಸೋಮಣ್ಣ ಹಿರಿಯ ನಾಯಕರು, ಪಕ್ಷದ ರಾಜ್ಯಾಧ್ಯಕ್ಷ ಕೇಳುವುದು ತಪ್ಪಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಕುರಿತು ರಾಷ್ಟ್ರಾಧ್ಯಕ್ಷರು ನಿರ್ಧರಿಸುತ್ತಾರೆ ಎಂದು ಹೇಳಿದ ಅವರು, ಗೋ ಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ ನಮ್ಮ ಸರ್ಕಾರ ತಂದಿದೆ. ಕಾಂಗ್ರೆಸ್ ಸರ್ಕಾರ ವಾಪಾಸ್ ಪಡೆಯಲು ಮುಂದಾಗಿದೆ, ಇದೊಂದು ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಈ ಕಾಯ್ದೆ ವಾಪಾಸ್ ಪಡೆದರೇ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ್ಕೆ ನೀಡಿದರು.

lokesh

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

58 mins ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

1 hour ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

1 hour ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

1 hour ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

1 hour ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

1 hour ago