BREAKING NEWS

ಚುನಾವಣಾ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ : ಕಟೀಲ್ ಸ್ಪಷ್ಟನೆ

ಬಳ್ಳಾರಿ : 2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಅಕ್ಕಿ ನಿರಾಕರಣೆ ಕುರಿತು ಮಾತನಾಡಿದ ಕಟೀಲ್, ಕೇಂದ್ರದಲ್ಲಿ ಕಳೆದ ಒಂಭತ್ತು ವರ್ಷ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದೇವೆ. ಭಯೋತ್ಪಾದನಾ ಚಟುವಟಿಕೆ ಶೇ 80 ಕಡಿಮೆ ಆಗಿದೆ, ನಕ್ಸಲ್ ಹಾಗೂ ಆತಂಕವಾದ ನಿರ್ಮೂಲನೆ ಮಾಡಿದ್ದು, ಕೇಂದ್ರ ಸರ್ಕಾರದ ನಿರಂತರವಾಗಿ 5 ಕೆಜಿ ಅಕ್ಕಿ ಕೊಡುತ್ತದೆ. ದೇಶದ ಎಲ್ಲಾ ರಾಜ್ಯಗಳಿಗೆ ಅಕ್ಕಿ ಕೊಡುತ್ತದೆ. ಬರ ಮತ್ತು ನೆರೆ ಬಂದಾಗ ವಿತರಿಸಲು ಕೇಂದ್ರ ಅಕ್ಕಿ ಸಂಗ್ರಹ ಮಾಡುತ್ತದೆ ಎಂದು ಹೇಳಿದರು.

ಒಳ ಒಪ್ಪಂದ ಆಗಿಲ್ಲ : ಇನ್ನೂ ರಾಜ್ಯದಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಕಾಂಗ್ರೆಸ್ ನ ಗ್ಯಾರೆಂಟಿ ಕಾರ್ಡ್ ಗಳಿಂದ ಸರ್ಕಾರ ಬಂದಿದೆ. ಇನ್ನೂ ರಾಜ್ಯದಲ್ಲಿ ಒಳ ಒಪ್ಪಂದದ ಬಗ್ಗೆ ಬಿಜೆಪಿ ನಾಯಕರ ಹೇಳಿಕೆಯನ್ನು ಗಮನಿಸಿದ್ದೇನೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಒಳ ಒಪ್ಪಂದ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಬಿಜೆಪಿಯಿಂದ ಲಿಂಗಾಯಿತರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಕಡಗಣನೆ ಮಾಡಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತ ಮುಖ್ಯಮಂತ್ರಿ ಮಾಡಿದ್ದು, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನ ಬಿಜೆಪಿ ಸಿಎಂ ಮಾಡಿದೆ. ರಾಜ್ಯದಲ್ಲಿ ಲಿಂಗಾಯತರು ಮತ್ತೆ ಸಿಎಂ ಆಗಬೇಕಾದ್ರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ನನ್ನ ಅವಧಿ ಮುಕ್ತಾಯವಾಗಿದೆ, ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆ ನಡೆಯುತ್ತದೆ. ನೈತಿಕವಾಗಿ ನಾನು ಜವಾಬ್ದಾರಿ ಹೊತ್ತಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ಜವಾಬ್ದಾರಿ ಹೊತ್ತು ರಾಜೀನಾಮೆ ಪತ್ರ ನೀಡಿದ್ದೇನೆ. ಮೌಖಿಕವಾಗಿಯೂ ರಾಷ್ಟ್ರೀಯ ಅಧ್ಯಕ್ಷ ರಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ ಬೇಡಿಕೆ ಇಟ್ಟ ವಿಚಾರವಾಗಿ ಮಾತನಾಡಿ, ಸೋಮಣ್ಣ ಹಿರಿಯ ನಾಯಕರು, ಪಕ್ಷದ ರಾಜ್ಯಾಧ್ಯಕ್ಷ ಕೇಳುವುದು ತಪ್ಪಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಕುರಿತು ರಾಷ್ಟ್ರಾಧ್ಯಕ್ಷರು ನಿರ್ಧರಿಸುತ್ತಾರೆ ಎಂದು ಹೇಳಿದ ಅವರು, ಗೋ ಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ ನಮ್ಮ ಸರ್ಕಾರ ತಂದಿದೆ. ಕಾಂಗ್ರೆಸ್ ಸರ್ಕಾರ ವಾಪಾಸ್ ಪಡೆಯಲು ಮುಂದಾಗಿದೆ, ಇದೊಂದು ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಈ ಕಾಯ್ದೆ ವಾಪಾಸ್ ಪಡೆದರೇ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ್ಕೆ ನೀಡಿದರು.

lokesh

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago