BREAKING NEWS

ಸನಾತನ ಧರ್ಮ ಕುರಿತ ಹೇಳಿಕೆಯ ಪ್ರತಿಯೊಂದು ಶಬ್ದವನ್ನೂ ನಾನು ಸಮರ್ಥಿಸುತ್ತೇನೆ: ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಗೆ ಬದ್ಧ. ಈ ಸಂಬಂಧ ಯಾವುದೇ ಕಾನೂನಾತ್ಮಕ ಸವಾಲು ಎದುರಿಸಲು ಸಿದ್ಧ ಎಂದು ತಮಿಳುನಾಡಿನ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಖಾತೆ ಸಚಿವ ಉದಯನಿಧಿ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡಿನ ಪ್ರಗತಿಪರ ಬರಹಗಾರರ ಹಾಗೂ ಕಲಾವಿದರ ಸಂಘ ಆಯೋಜಿಸಿದ್ದ ‘ಸನಾತನ ನಿರ್ಮೂಲನೆ’ ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಅವರು ‘ಸನಾತನ’ ಪರಿಕಲ್ಪನೆ ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾದದ್ದು ಹಾಗೂ ಇದನ್ನು ನಿರ್ಮೂಲನೆ ಮಾಡಲೇಬೇಕು ಎಂದು ಹೇಳಿದ್ದು, ವಿವಾದಕ್ಕೆ ಕಾರಣವಾಗಿತ್ತು.

“ನನಗೆ ವಿಶೇಷ ಭಾಷಣ ಮಾಡುವ ಅವಕಾಶ ನೀಡಿದ್ದಕ್ಕಾಗಿ ಈ ಸಮ್ಮೇಳನದ ಆಯೋಜಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸನಾತನ ವಿರೋಧಿ ಸಮ್ಮೇಳನ ಎನ್ನುವ ಬದಲಾಗಿ ‘ಸನಾತನ ನಿರ್ಮೂಲನೆ ಸಮ್ಮೇಳನ’ ಎಂದು ಈ ಸಮ್ಮೇಳನಕ್ಕೆ ಹೆಸರಿಟ್ಟಿದ್ದೀರಿ. ಇದನ್ನು ಶ್ಲಾಘಿಸುತ್ತೇನೆ” ಎಂದು ಉದಯನಿಧಿ ಹೇಳಿದ್ದಾಗಿ ಎಎನ್‍ಐ ವರದಿ ಮಾಡಿದೆ.

“ಕೆಲವು ಅಂಶಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ಡೆಂಗ್ಯು, ಸೊಳ್ಳೆ, ಮಲೇರಿಯಾ, ಕೊರೋನಾವನ್ನು ನಾವು ವಿರೋಧಿಸಲು ಸಾಧ್ಯವಿಲ್ಲ. ಇವುಗಳನ್ನು ನಿರ್ಮೂಲನೆ ಮಾಡಬೇಕು. ಅಂತೆಯೇ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು. ಸನಾತನವನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು. ಈ ಹೆಸರು ಸಂಸ್ಕತದಿಂದ ಬಂದದ್ದು, ಅದು ಸಾಮಾಜಿಕ ನ್ಯಾಯ ಹಾಗೂ ಸಮಾನತೆಗೆ ವಿರುದ್ಧವಾದದ್ದು” ಎಂದು ಹೇಳಿದ್ದರು.

ಬಳಿಕ ಎಕ್ಸ್ ನಲ್ಲಿ ಬಿಜೆಪಿ ಐಟಿ ಕೋಶದ ಮುಖ್ಯಸ್ಥ ಅಮಿತ್ ಮಾಳವೀಯ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಉದಯನಿಧಿ, “ಸನಾತನ ಧರ್ಮ ಅನುಯಾಯಿಗಳ ಸಾಮೂಹಿಕ ಹತ್ಯೆಗೆ ನಾನು ಎಂದೂ ಕರೆ ನೀಡಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

“ಸನಾತನ ಧರ್ಮ ಎನ್ನುವುದು ಜನರನ್ನು ಜಾತಿ/ ಧರ್ಮದ ಹೆಸರಿನಲ್ಲಿ ವಿಭಜಿಸುವ ತತ್ವ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವುದು ಎಂದರೆ ಮಾನವೀಯತೆ ಮತ್ತು ಸಮಾನತೆಯನ್ನು ಎತ್ತಿಹಿಡಿಯುವುದು. ನಾನು ಹೇಳಿದ ಪ್ರತಿಯೊಂದು ಶಬ್ದವನ್ನೂ ನಾನು ಸಮರ್ಥಿಸುತ್ತೇನೆ. ಸನಾತನದ ಧರ್ಮದ ಕಾರಣದಿಂದ ದಮನಕ್ಕೆ ಮತ್ತು ತುಳಿತಕ್ಕೆ ಒಳಗಾದವರ ಪರವಾಗಿ ನಾನು ಮಾತನಾಡುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

1 hour ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

3 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

5 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

5 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

7 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

8 hours ago