BREAKING NEWS

ವೆಸ್ಟೆಂಡ್ ಹೋಟೆಲ್​​ನಲ್ಲಿ ಇದ್ಕೊಂಡು ಬೆಳಗ್ಗೆಯಿಂದ ರಾತ್ರಿ 1 ಗಂಟೆವರೆಗೂ ಕೆಲಸ ಮಾಡ್ತಿದ್ದೆ : ಎಚ್​ಡಿಕೆ

ಬಾಗಲಕೋಟೆ : ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡುತ್ತಿದ್ದಾರೆ. ವೆಸ್ಟೆಂಡ್ ಹೋಟೆಲ್ ನಲ್ಲಿ ಕಾಲ ಕಳೆದು, ಅಧಿಕಾರ ಕಳಕೊಂಡ ಎಂಬ ಸಿದ್ದರಾಮಯ್ಯ ಟೀಕೆಗೆ ಎಚ್‌ಡಿಕೆ ಖಾರವಾಗಿ ಪ್ರತಿಕ್ರಿಯೆ ನೀಡುವ ಮೂಲಕವಾಗಿ ತಿರುಗೇಟು ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾಜಿ ಸಿಎಂ ಎಚ್.ಡಿಕೆ ಮಾತನಾಡಿ, ಈ ಬಗ್ಗೆ ಸಾವಿರಬಾರಿ ಹೇಳಿದ್ದೇನೆ, ಮೊದಲನೇ ಅಪರಾಧ ಸಿದ್ದರಾಮಯ್ಯ ಅವರದ್ದೇ ಆಗಿದೆ. ಜಾರ್ಜ್ ಹೆಸರಲ್ಲಿ ಮನೆ ತಗೊಂಡು ಅದರಲ್ಲಿ ಮುಂದುವರೆದರು. ನನಗೆ ಸರ್ಕಾರಿ ಕ್ವಾಟರ್ಸ್ ಮನೆ ಬಿಟ್ಟುಕೊಡಲಿಲ್ಲ. ಈಗ ಕೇಂದ್ರ ನಾಯಕರೆಲ್ಲ ಬರ್ತಿದ್ದಾರಲ್ಲ, ಅವರು ಎಲ್ಲಿ ವಾಸ್ತವ್ಯ ಮಾಡ್ತಾರೆ ? ವೆಸ್ಟೆಂಡ್ ಹೋಟೆಲ್​​​ನಲ್ಲಿ ನಾನು ಪರ್ಮನೆಂಟ್ ಆಗಿ ಇದ್ದವನಾ ? ಎಂದು ಪ್ರಶ್ನೆ ಮಾಡಿದ್ದಾರೆ.

ನಾನು ಹೋಟೆಲ್​​ನಲ್ಲಿ ಇದ್ದುಕೊಂಡು ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೂ ಕೆಲಸ ಮಾಡುತಿದ್ದೆ. ಸಿದ್ದರಾಮಯ್ಯ ಯಾವ ರೀತಿ ಕೆಲಸ ಮಾಡುತ್ತಿದ್ದರು ಎಂಬುದು ಎಲ್ಲಿರಿಗೂ ಗೊತ್ತಿರುವ ವಿಚಾರವಾಗಿದೆ. ಮಧ್ಯಾಹ್ನ ೧ ಗಂಟೆಗೆ ವಿಧಾನಸೌಧ ಖಾಲಿ ಮಾಡಿಕೊಂಡ ಹೋದ್ರೆ ಎಲ್ಲಿಗೆ ಹೋಗ್ತಿದ್ರು, ಆರು ಗಂಟೆ ಮೇಲೆ ಯಾರಿಗೆ ಸಿಗುತ್ತಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

ನಾನು ರಾತ್ರಿ ೧೨ ಗಂಟೆವೆರೆಗೆ ಕೆಲಸ ಮಾಡ್ತಿದ್ದೆ. ಕಾಂಗ್ರೆಸ್​​ನ 78 ಶಾಸಕರಿಗೆ ನನ್ನ 14 ತಿಂಗಳ ಆಡಳಿತ ಅವಧಿಯಲ್ಲಿ 19 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದೀನಿ. ಇವತ್ತು ಬಿಜೆಪಿ ಸರ್ಕಾರದಲ್ಲಿ ಕೆಲಸ ನಡೆದಿರೋದು, ನಾನು ಸಿಎಂ ಆಗಿದ್ದಾಗ ಕೊಟ್ಟ ದುಡ್ಡಿನಿಂದ. ಬಾದಾಮಿಗೆ ಅಭಿವೃದ್ದಿ ಕೆಲಸ ಆಗಿದ್ದು, ನಾನು ಕೊಟ್ಟ ದುಡ್ಡಿನಲ್ಲಿ‌ಯೇ ಎಂದು ತಮ್ಮ ಆಢಳಿತಾವಧಿಯ ಕುರಿತಾಗಿ ಮಾತನಾಡಿದ್ದಾರೆ.

ಸಿದ್ದರಾಮಯ್ಯಗೆ ಬಿಜೆಪಿಯವರಿಂದ ದುಡ್ಡು ತೊಗೊಳೊದಕ್ಕೆ ಆಯ್ತಾ? ಜನರ ಬಳಿಗೆ ಹೋಗಿ ಕೆಲಸ ಹೆಂಗೆ ಮಾಡಬೇಕು ಎಂಬುದನ್ನ ಸಿದ್ದರಾಮಯ್ಯ ಅವರಿಂದ ಕಲಿಯಬೇಕಿಲ್ಲ. ಬಾದಾಮಿಗೆ ತಂದಿದ್ದು ನಾಲ್ಕು ಸಾವಿರ ಕೋಟಿ ಎಲ್ಲಿದೆ ದುಡ್ಡು? ಮಳೆಗಾಲದಲ್ಲಿ ಜಲಾವೃತವಾಗುವ ಯಾವುದಾದ್ರೂ ಒಂದು ಹಳ್ಳಿಗೆ ಪುನರ್ ವಸತಿ ಕಲ್ಪಿಸಿದ್ದಾರಾ? 5 ವರ್ಷದಲ್ಲಿ ಬಾದಾಮಿಗೆ ಮೂಲಭೂತ ಸೌಲಭ್ಯವನ್ನಾದರೂ ಕಲ್ಪಿಸಿದ್ದಾರಾ ಎಂದು ಎಚ್.ಡಿಕೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

lokesh

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

4 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

4 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

5 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

5 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

5 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 hours ago